ಇದಕ್ಕೆ ಪ್ರತಿಯಾಗಿ ಸ್ವಾಮೀಜಿಗಳ ಶಿಷ್ಯರು ಕೂಡ ಪ್ರತಿ ದೂರನ್ನು ದಾಖಲಿಸಿದ್ದಾರೆ.
ಯಾವ ಕಾರಣಕ್ಕೆ ದೂರು ದಾಖಲಾಗಿದೆ ಎಂಬುದು ಸ್ಪಷ್ಟವಾಗಿ ತಿಳಿದು ಬಂದಿಲ್ಲ. ಕುಮಟಾ ನಗರದಲ್ಲಿ ನಡೆಯುತ್ತಿರುವ ರಾಮಕಥಾ ಕಾರ್ಯಕ್ರಮಕ್ಕೆ ಕಲಾವಿದರು ಭಾಗವಹಿಸಬಾರದು ಎಂದು ಮಠದಿಂದ ಬೆದರಿಕೆ ಬಂದಿದೆ ಎಂದು ದೂರು ದಾಖಲಾಗಿದೆ ಎಂದು ಕೆಲವು ಮೂಲಗಳು ಹೇಳಿದರೆ, ಶ್ರೀಗಳು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆಪಾದಿಸಲಾಗಿದೆ ಎಂದು ಹೇಳಲಾಗುತ್ತಿದೆ.
ಕೇವಲ ಬೆಂಗಳೂರು ಮಾತ್ರವಲ್ಲದೇ, ಉತ್ತರಕನ್ನಡದ ಹೊನ್ನಾವರ, ದಕ್ಷಿಣ ಕನ್ನಡದ ಸುಳ್ಯದಲ್ಲಿಯೂ ಬೇರೆ ಬೇರೆಯವರಿಂದ ರಾಘವೇಶ್ವರರ ವಿರುದ್ಧ ದೂರು ದಾಖಲಾಗಿದೆ ಎಂದು ತಿಳಿದು ಬಂದಿದೆ.