ಯಡಿಯೂರಪ್ಪ ವಿರುದ್ಧ ಪೊಲೀಸ್ ಆಯುಕ್ತರಿಗೆ ದೂರು

ಶನಿವಾರ, 22 ಜುಲೈ 2017 (18:13 IST)
ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಆಪ್ತ ಸಹಾಯಕ ವಿನಯ್ ಅಪಹರಣ ಪ್ರಕರಣದಲ್ಲಿ ತಮ್ಮ ಆಪ್ತ ಸಹಾಯಕ ಸಂತೋಷ್‌ನನ್ನು ರಕ್ಷಿಸಿಕೊಳ್ಳಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಪಿತೂರಿ ನಡೆಸಿದ್ದಾರೆ ಎಂದು ದೂರಿನಲ್ಲಿ ದಾಖಲಿಸಲಾಗಿದೆ.
 
ವಿನಯ್ ಅಪಹರಣದ ಪ್ರಕರಣದ ತನಿಖೆ ನಡೆಯುತ್ತಿರುವಾಗಲೇ ಆರೋಪಿ ಸಂತೋಷ್ ನಿರಪರಾಧಿ ಎಂದು ನಗರ ಪೊಲೀಸ್ ಆಯುಕ್ತರಿಗೆ ಪತ್ರ ಬರೆದು ಕಾನೂನುಬಾಹಿರವಾಗಿ ಪ್ರಭಾವ ಬೀರಲು ಯತ್ನಿಸಿದ್ದಾರೆ ಎಂದು ವಕೀಲ ಅಮೃತೇಶ್ ಎನ್ನುವವರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
 
ಸಂತೋಷ್ ನನ್ನ ಸಂಬಂಧಿ ಏಳು ವರ್ಷದಿಂದ ನನ್ನ ಆಪ್ತ ಸಹಾಯಕರಾಗಿದ್ದಾರೆ. ಯಡಿಯೂರಪ್ಪ ಮಾಜಿ ಮುಖ್ಯಮಂತ್ರಿಯಾಗಿದ್ದರಿಂದ ಆರೋಪಿಯನ್ನು ರಕ್ಷಿಸಿಕೊಳ್ಳಲು ತಮ್ಮ ರಾಜಕೀಯ ಪ್ರಭಾವ ಬೀರುತ್ತಿದ್ದಾರೆ ಎಂದು ದೂರುದಾರರು ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ