ಕ್ವಾರಂಟೈನ್ ಉಲ್ಲಂಘಿಸಿದವರ ವಿರುದ್ಧ ಬೀಳ್ತಿವೆ ಕೇಸ್ ಮೇಲೆ ಕೇಸ್

ಬುಧವಾರ, 1 ಏಪ್ರಿಲ್ 2020 (14:06 IST)
ಕೊರೊನಾ ಸೋಂಕು ನಿಯಂತ್ರಣ ಹಿನ್ನಲೆಯಲ್ಲಿ ಗೃಹ ಬಂಧನ (ಕ್ವಾರಂಟೈನ್) ನಿಯಮ ಉಲ್ಲಂಘನೆ ಮಾಡಿದವರ ವಿರುದ್ಧ ಕೇಸ್ ದಾಖಲಾಗಿವೆ.

ಕ್ವಾರಂಟೈನ್ ಉಲ್ಲಂಘನೆ ಮಾಡಿದ ಮೂವರ ವಿರುದ್ಧ  ಬಳ್ಳಾರಿ ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಳ್ಳಾರಿ  ತಾಲೂಕಿನ ಕಮ್ಮರಚೇಡು ಗ್ರಾಮದ ಸತೀಶ್, ಭರತ್ ಹಾಗೂ ಅಶೋಕ್ ವಿರುದ್ಧ ಪ್ರಕರಣ ದಾಖಲಿಸಿದೆ.

 ಪುಣೆಯಿಂದ ಬಂದಿದ್ದ ಈ ಮೂವರಿಗೆ ಜಿಲ್ಲಾಸ್ಪತ್ರೆಯಲ್ಲಿ ಪರೀಕ್ಷೆ ಮಾಡಿ, ಬಳಿಕ ಗೃಹ ಬಂಧನದಲ್ಲಿ ಇರುವಂತೆ ಸೂಚಿಸಲಾಗಿತ್ತು.
ಆದರೆ ಅವಧಿಗೂ ಮುನ್ನವೇ ನಿಯಮ ಉಲ್ಲಂಘಿಸಿ ಸಾರ್ವಜನಿಕವಾಗಿ ಓಡಾಟ ನಡೆಸಿದ್ದರಿಂದಾಗಿ ಅವರನ್ನು
ಸೆಕ್ಷನ್ 144 ಹಾಗೂ ಜಿಲ್ಲಾಧಿಕಾರಿಗಳ ಆದೇಶ ಉಲ್ಲಂಘನೆಯಡಿ ಪ್ರಕರಣ ದಾಖಲು ಮಾಡಲಾಗಿದೆ. ಸದ್ಯ ಈ ಮೂವರ ಬಗ್ಗೆ ಹೆಚ್ಚಿನ ನಿಗಾವಹಿಸಲು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ