ವಿಧಾನಸೌಧದಲ್ಲಿ ನಡೆಯಲಿರುವ ಸರ್ವಪಕ್ಷ ಸಭೆಯಲ್ಲಿ ತಮಿಳುನಾಡಿನ ತಂತ್ರಕ್ಕೆ ಪರ್ಯಾಯ ತಂತ್ರ ರೂಪಿಸುವ ಕುರಿತು ಚರ್ಚೆ ನಡೆಯಲಿದ್ದು, ವಿಧಾನಮಂಡಲದ ಉಭಯ ವಿಪಕ್ಷ ನಾಯಕರು, ಕಾವೇರಿ ಜಲಾಯನ ಪ್ರದೇಶದ ಉಸ್ತುವಾರಿ ಸಚಿವರು ಹಾಗೂ ಕೇಂದ್ರ ಸಚಿವರು ಸಭೆಯಲ್ಲಿ ಭಾಗಿಯಾಗಲಿದ್ದಾರೆ.
ಮಳೆ ಕೊರತೆಯಿಂದಾಗಿ ರಾಜ್ಯದಲ್ಲಿ ನೀರಿನ ಸಮಸ್ಯೆ ಇರುವ ಹಿನ್ನೆಲೆಯಲ್ಲಿ ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಆದರೆ, ಕರ್ನಾಟಕ ಪರ ವಕೀಲರಾಗಿರುವ ನಾರಿಮನ್ ಅವರು ತಮಿಳುನಾಡಿಗೆ ನೀರು ಬಿಡುವುದು ಸೂಕ್ತ ಎಂದು ಸಲಹೆ ನೀಡಿರುವ ಕುರಿತು ಸಭೆಯಲ್ಲಿ ಚರ್ಚೆಯಾಗಲಿದೆ.