ಕಾವೇರಿ ವಿವಾದ: ಮತ್ತೊಬ್ಬ ಜೆಡಿಎಸ್ ಶಾಸಕ ಅಪ್ಪಾಜಿಗೌಡ ರಾಜೀನಾಮೆ

ಮಂಗಳವಾರ, 20 ಸೆಪ್ಟಂಬರ್ 2016 (18:39 IST)
ಲೋಕಸಭೆ ಜೆಡಿಎಸ್ ಸಂಸದ ಸಿ.ಎಸ್.ಪುಟ್ಟರಾಜು ರಾಜೀನಾಮೆ ಘೋಷಿಸುತ್ತಿದ್ದಂತೆ, ಇದೀಗ ಜೆಡಿಎಸ್‌ನ ಮಂಡ್ಯ ಕ್ಷೇತ್ರದ ವಿಧಾನಪರಿಷತ್ ಸದಸ್ಯ ಅಪ್ಪಾಜಿಗೌಡ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.
 
ನಮಗೆ ಅಧಿಕಾರ ಮುಖ್ಯವಲ್ಲ ರೈತರ ಹಿತ ಮುಖ್ಯ. ರೈತರ ಹಿತಕ್ಕಾಗಿ ಯಾವ ತ್ಯಾಗಕ್ಕೆ ಬೇಕಾದರೂ ಸಿದ್ದ ಎಂದು ಘೋಷಿಸಿದ್ದಾರೆ.
 
ಸುಪ್ರೀಂಕೋರ್ಟ್ ತೀರ್ಪು ಹೊರಬೀಳುತ್ತಿದ್ದಂತೆ ಭುಗಿಲೆದ್ದ ಪ್ರತಿಭಟನೆಗಳಲ್ಲಿ ಪಾಲ್ಗೊಂಡ ಅವರು, ರೈತರಿಗಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಘೋಷಿಸಿದರು.
 
ಮಂಡ್ಯ, ಮೈಸೂರು, ಬೆಂಗಳೂರು, ಚಾಮರಾಜನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕಾವೇರಿ ಪ್ರತಿಭಟನೆ ಕಾವೇರಿದೆ. ರೈತ ಸಂಘಟನೆಗಳು ಮತ್ತು ಕನ್ನಡ ಪರ ಹೋರಾಟಗಾರರು ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಬಿಡಬಾರದು ಎಂದು ಒತ್ತಾಯಿಸುತ್ತಿವೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ವೆಬ್ದುನಿಯಾವನ್ನು ಓದಿ