ತಲೆಮರೆಸಿಕೊಂಡಿರುವ ಜನಾರ್ಧನ ರೆಡ್ಡಿಗಾಗಿ ಸಿಸಿಬಿ ಎಚ್ಚರಿಕೆ
ರೆಡ್ಡಿ ಬಂಧನಕ್ಕಾಗಿ ತೀವ್ರ ಶೋಧ ನಡೆಸುತ್ತಿರುವ ಸಿಸಿಬಿ ಪೊಲೀಸರಿಗೆ ಇದುವರೆಗೆ ಬಂಧನ ಸಾಧ್ಯವಾಗಿಲ್ಲ. ಈ ನಡುವೆ ರೆಡ್ಡಿ ಪರ ವಕೀಲರು ನಿರೀಕ್ಷಣಾ ಜಾಮೀನು ಅರ್ಜಿ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು, ಅದು ನ.12 ಕ್ಕೆ ಮುಂದೂಡಿಕೆಯಾಗಿದೆ.
ಇದೀಗ ಸಿಸಿಬಿ ಪೊಲೀಸರು ಶರಣಾಗತಿಯಾಗುವಂತೆ ಜನಾರ್ಧನ ರೆಡ್ಡಿಗೆ ನೋಟಿಸ್ ನೀಡಿದ್ದಾರೆ. ನ.11 ರೊಳಗಾಗಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನಲ್ಲಿ ಸೂಚಿಸಲಾಗಿದೆ. ಈ ನಡುವೆ ರೆಡ್ಡಿ ಒಡೆತನದ ಎಲ್ಲಾ ನಿವಾಸಗಳು, ಕಚೇರಿಗಳ ಮೇಲೆ ಸಿಸಿಬಿ ಅಧಿಕಾರಿಗಳು ತೀವ್ರ ನಿಗಾ ವಹಿಸಿದ್ದಾರೆ.