ಕನ್ನಡ ರಾಜ್ಯೋತ್ಸವಕ್ಕೆ ಶುಭಕೋರಿದ ದಾಸ ದರ್ಶನ್, ಕಿಚ್ಚ ಸುದೀಪ್, ರಾಜಕೀಯ ಗಣ್ಯರು

ಗುರುವಾರ, 1 ನವೆಂಬರ್ 2018 (09:56 IST)
ಬೆಂಗಳೂರು: ಕನ್ನಡ ರಾಜ್ಯೋತ್ಸವ ದಿನವಾದ ಇಂದು ನಾಡಿನ ಜನರಿಗೆ ಸಿನಿ, ರಾಜಕೀಯ ಗಣ್ಯರು ಶುಭಾಷಯ ಕೋರಿದ್ದಾರೆ.

ಸಿಎಂ ಕುಮಾರಸ್ವಾಮಿ, ವಿಪಕ್ಷ ನಾಯಕ ಬಿಎಸ್ ಯಡಿಯೂರಪ್ಪ, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ರಾಜಕೀಯ ಕ್ಷೇತ್ರದ ಪ್ರಮುಖರು ಟ್ವಿಟರ್ ಮುಖಾಂತರ ಶುಭಾಷಯ ಕೋರಿದ್ದಾರೆ.

ಅಷ್ಟೇ ಅಲ್ಲದೆ, ಸ್ಯಾಂಡಲ್ ವುಡ್ ಸ್ಟಾರ್ ಗಳಾದ ಕಿಚ್ಚ ಸುದೀಪ್,  ಚಾಲೆಂಜಿಂಗ್ ಸ್ಟಾರ್ ದರ್ಶನ್, ನವರಸನಾಯಕ ಜಗ್ಗೇಶ್ ಸೇರಿದಂತೆ ಹಲವು ನಟ ನಟಿಯರು ರಾಜ್ಯೋತ್ಸವಕ್ಕೆ ಶುಭ ಕೋರಿದ್ದಾರೆ.

ರಾಜ್ಯೋತ್ಸವ ಪ್ರಯುಕ್ತ ಬೆಂಗಳೂರಿನ ಕಂಠೀರವ ಮೈದಾನದಲ್ಲಿ ಸಿಎಂ ಕುಮಾರಸ್ವಾಮಿ ಧ್ವಜಾರೋಹಣ ನೆರವೇರಿಸಿ ನಾಡ ಧ್ವಜಕ್ಕೆ ಗೌರವ ಸಮರ್ಪಿಸಿದರು. ಶಿಕ್ಷಣ ಇಲಾಖೆ ವತಿಯಿಂದ ಸಾಂಸ್ಕೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ನೂರಾರು ವಿದ್ಯಾರ್ಥಿಗಳು ಕನ್ನಡ ನಾಡ ಗೀತೆ, ಸಂಸ್ಕೃತಿ ಬಿಂಬಿಸುವ ನೃತ್ಯ ಕಾರ್ಯಕ್ರಮಗಳ ಮೂಲಕ ರಂಜಿಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ