ಆಂಧ್ರಕ್ಕೆ 15ಸಾವಿರ ಕೋಟಿ ನೀಡಿದ ಕೇಂದ್ರ, ಕರ್ನಾಟಕಕ್ಕೆ ನೀಡಿದ್ದು ಚೊಂಬು: ದಿನೇಶ್ ಗುಂಡೂರಾವ್
ರಾಜ್ಯಕ್ಕೆ ಯಾವ ಹೊಸ ಯೋಜನೆಗಳ ಪ್ರಸ್ತಾಪವೂ ಇಲ್ಲ. ಹಳೆ ಯೋಜನೆಗಳಿಗೆ ಅನುದಾನವಿಲ್ಲ. ರಾಯಚೂರಿನಲ್ಲಿ ಸ್ಥಾಪನೆಯಾಗಬೇಕಿದ್ದ ಏಮ್ಸ್ ಮೆಡಿಕಲ್ ಕಾಲೇಜಿನ ಪ್ರಸ್ತಾಪವಿಲ್ಲ. ಒಟ್ಟಾರೆ ಕರ್ನಾಟಕದ ಬಗ್ಗೆ ಮಾತೇ ಇಲ್ಲ.
ಇನ್ನು ಉದ್ಯೋಗಿಗಳಿಗೆ ಆದಾಯ ತೆರಿಗೆ ವಿನಾಯಿತಿ ಇಲ್ಲ. ಬಡವರಿಗೆ ರೈತರಿಗೆ ಯಾವ ವಿಶೇಷ ಯೋಜನೆಗಳೂ ಇಲ್ಲ.
ಮೋದಿ ಸರ್ಕಾರದ ಬಜೆಟ್ ಎಂದಿನಂತೆ ಶ್ರೀಮಂತರ ಪರ ಹಾಗು ಬಡವರ, ತೆರಿಗೆ ಪಾವತಿದಾರರ ವಿರೋಧಿ ಬಜೆಟ್ ಆಗಿದೆ. ಸರ್ಕಾರವನ್ನು ಉಳಿಸಿಕೊಳ್ಳಲು ಮಿತ್ರಪಕ್ಷಗಳ ಓಲೈಕೆಗೆ ಸಾವಿರಾರು ಕೋಟಿ ಮೀಸಲಿಟ್ಟ ಬಜೆಟ್ ಆಗಿದೆ.