ಬರಗಾಲದ ಹಿನ್ನೆಲೆಯಲ್ಲಿ ರೈತರ ಸಾಲ ಮನ್ನಾ ಮಾಡುವಂತೆ ಶಾಸಕರು ಪಕ್ಷಭೇದ ಮರೆತು ಒತ್ತಾಯಿಸುತ್ತಿದ್ದಾರೆ. ಈ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಕೇಂದ್ರದ ನೆರವು ಅಗತ್ಯ. ಸಹಕಾರ ಸಂಘಗಳ ಮೂಲಕ ರೈತರು 10 ಸಾವಿರ ಕೋಟಿ ರೂ.ಗಳ ಸಾಲ ಪಡೆದಿದ್ದಾರೆ. ರಾಷ್ಟ್ರೀಕೃತ ಬ್ಯಾಂಕುಗಳು 35 ಸಾವಿರ ಕೋಟಿ ರೂ. ವಿತರಿಸಿವೆ. ಒಟ್ಟಾರೆ 45 ಸಾವಿರ ಕೋಟಿ ರೂಪಾಯಿಗಳ ಸಾಲ ರೈತರ ತಲೆಯ ಮೇಲಿದೆ. ಕೇಂದ್ರ ನೆರವಾದರೆ ಸಾಲ ಮನ್ನಾ ಮಾಡಲು ನಾವು ಸಿದ್ಧ. ಈ ಕುರಿತು ಪ್ರಧಾನಿಯವರಿಗೂ ಪತ್ರ ಬರೆದು ಮನವಿ ಮಾಡಲಾಗಿದೆ. ಆದರೆ ಈ ವರೆಗೆ ಸ್ಪಂದನೆ ಸಿಕ್ಕಿಲ್ಲ. ಈ ಬಗ್ಗೆಯೂ ಸಂಸದರು ಒತ್ತಡ ಹೇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.
500 ಮತ್ತು ಒಂದು ಸಾವಿರ ಮುಖಬೆಲೆಯ ನೋಟುಗಳು ರದ್ಧಾದ ಬಳಿಕ ರೈತರು, ಕೂಲಿ ಕಾರ್ಮಿಕರಿಗೆ ಭಾರಿ ತೊಂದರೆಯಾಗಿದೆ. ಸಹಕಾರ ಸಂಸ್ಥೆಗಳು ರೈತರಿಂದ ಠೇವಣಿ ಸ್ವೀಕಾರ ಮಾಡುತಿಲ್ಲ. ಈ ಬಗ್ಗೆ ಹಣಕಾಸು ಸಚಿವರಿಗೆ ಮೂರು ಪತ್ರಗಳನ್ನು ಬರೆಯಲಾಗಿದೆ. ಅದಕ್ಕೂ ಉತ್ತರ ಬಂದಿಲ್ಲ ಎಂದು ತಿಳಿಸಿದರು.