ನ್ಯಾಯಾಲಯ ಆದೇಶ ನೀಡಿದ್ದರೂ ರಸ್ತೆ ಗುಂಡಿಗಳನ್ನು ಮುಚ್ಚುವ ಕೆಲಸ ಸರ್ಕಾರ ಮಾಡಲಿಲ್ಲ. ಆಗಿದ್ದ ಹಾಗೆ ರಸ್ತೆ ಗುಂಡಿ ಮುಚ್ಚುವ ಕೆಲಸ ಸರ್ಕಾರ ಮಾಡಿದ್ದರೆ ಇಂದು ಈ ಪರಿಸ್ಥಿತಿ ಇರುತ್ತಿರಲಿಲ್ಲ. ಆದರೆ ಸರ್ಕಾರಕ್ಕೆ ಎಷ್ಟು ಬಾರಿ ಹೇಳಿದರು ಕೂಡ ಬಿಜೆಪಿಯವರು ಏನಾದರು ಹೇಳಲಿ ನಾವು ಕೇರ್ ಮಾಡುವುದಿಲ್ಲ ಎಂದು ಹೇಳುತ್ತಾರೆ. ಅಂದರೆ ಬಿಜೆಪಿ ಇರುವುದೇಕೆ?; ಬಿಜೆಪಿ ವಿರೋಧ ಪಕ್ಷವಾಗಿ ಕೆಲಸ ಮಾಡಬಾರದೇ ಎಂದು ಪ್ರಶ್ನಿಸಿದರು.
ಇಂದು ಬೆಂಗಳೂರಿನ ಎಲ್ಲ ಉದ್ಯಮಿಗಳು ರಸ್ತೆ ಗುಂಡಿಗಳ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬೆಂಗಳೂರಿನ ಈ ಪರಿಸ್ಥಿತಿಯಿಂದ ಬೆಂಗಳೂರು ಬಿಟ್ಟು ಹೋಗಬೇಕಾಗುತ್ತದೆ ಎಂದು ಟ್ವೀಟ್ ಮಾಡುತ್ತಿದ್ದಾರೆ; ಅಂತಹ ಪರಿಸ್ಥಿತಿ ಸರ್ಕಾರಕ್ಕೆ ಇದ್ದರೆ, ಸರ್ಕಾರವು ರಸ್ತೆಗಳನ್ನು ಸರಿಪಡಿಸಿ ಅನುಕೂಲ ಮಾಡಿಕೊಡುತ್ತೇವೆ ಎಂದು ಹೇಳುವುದನ್ನು ಬಿಟ್ಟು, ಯಾರು ಬೇಕಾದರು ಹೋಗುವವರ ಹೋಗಬಹುದು ಎಂದು ಉದ್ಧಟತನದ ಹೇಳಿಕೆಯನ್ನು ನೀಡಿದ್ದಾರೆ ಎಂದು ಆಕ್ಷೇಪಿಸಿದರು.