ಕಾನೂನು, ಸುವ್ಯವಸ್ಥೆ ಹದಗೆಟ್ಟ ದಾಖಲೆ ಬಹಿರಂಗಕ್ಕೆ ಸವಾಲು

ಮಂಗಳವಾರ, 6 ಫೆಬ್ರವರಿ 2018 (19:22 IST)

ರಾಜ್ಯದಲ್ಲಿನ ಕಾನೂನು ಸುವ್ಯವಸ್ಥೆಯ ಬಗ್ಗೆ ಸುಳ್ಳು ಆರೋಪ ಮಾಡುವ ಬಿಜೆಪಿಯವರು ದಾಖಲೆಗಳಿದ್ದರೆ ಬಹಿರಂಗಪಡಿಸಲಿ, ಅಗತ್ಯವಾದರೆ ಬಹಿರಂಗ ಚರ್ಚೆ ನಡೆಸಲೂ ಸಿದ್ಧರಿದ್ದೇವೆ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗುಜರಾತ್ ಹಾಗೂ ಉತ್ತರಪ್ರದೇಶದಲ್ಲಿ ಹೆಚ್ಚಿನ ಅಪರಾಧಗಳು ನಡೆಯುತ್ತಿದ್ದು, ಕ್ರೈಂ ರೇಟ್ ಕೂಡ ಅಲ್ಲಿ ಹೆಚ್ಚಿದೆ. ಆದರೆ, ವಿನಾಕಾರಣ ರಾಜ್ಯದ ಮೇಲೆ ಗೂಬೆ ಕೂರಿಸಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೋಮು ಗಲಭೆ ಹಾಗೂ ಹತ್ಯೆಯಂತಹ ಪ್ರಕರಣದಲ್ಲಿ ಸಂಘ ಪರಿವಾರದವರ ಕೈವಾಡವಿರುವ ಬಗ್ಗೆ ದಾಖಲೆಗಳಿವೆ. ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ದಾಖಲೆಗಳು ನೀಡಿದ್ದು, ಸಂಸತ್ತಿನಲ್ಲಿ ಪ್ರಸ್ತಾಪಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ