ಚುನಾವಣಾ ಕಣದಿಂದ ಹಿಂದೆ ಸರಿದ ಚಂದ್ರಶೇಖರ್; ಯಡಿಯೂರಪ್ಪ ವಿರುದ್ಧ ಹೈಕಮಾಂಡ್‍ಗೆ ದೂರು ದಾಖಲು

ಗುರುವಾರ, 1 ನವೆಂಬರ್ 2018 (12:56 IST)
ಬೆಂಗಳೂರು : ರಾಮನಗರದಲ್ಲಿ ಬಿಜೆಪಿ ಅಭ್ಯರ್ಥಿ ಚಂದ್ರಶೇಖರ್ ಕಣದಿಂದ ಹಿಂದ ಸರಿದದ್ದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರೇ ನೇರ ಹೊಣೆ ಎಂದು ಅವರ  ವಿರುದ್ಧ ಹೈಕಮಾಂಡ್‍ಗೆ ದೂರು ದಾಖಲಾಗಿದೆ.


ರಾಮನಗರದ ಉಪಚುನಾವಣೆಗೆ ಇತ್ತೀಚೆಗೆಷ್ಟೇ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾದ  ಚಂದ್ರಶೇಖರ್  ಅವರನ್ನು ಅಭ್ಯರ್ಥಿಯಾಗಿ ಕಣಕ್ಕೀಳಿಸಲಾಗಿತ್ತು. ಆದರೆ ಇಂದು  ಚಂದ್ರಶೇಖರ್ ಚುನಾವಣಾ ಕಣದಿಂದ ಹಿಂದೆಸರಿದ ಕಾರಣ ಬಿಜೆಪಿಯವರು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರ ಮೇಲೆ ಗರಂ ಆಗಿದ್ದಾರೆ.


ಆದಕಾರಣ ರಾಮನಗರದಲ್ಲಾದ ಮುಖಭಂಗಕ್ಕೆ ಯಡಿಯೂರಪ್ಪ ಅವರೇ ನೇರ ಹೊಣೆ. ಸಿ ಪಿ ಯೋಗೇಶ್ವರ್ ಅವರನ್ನು ಬಿಜೆಪಿಗೆ ಕರೆ ತಂದಿದ್ದೇ ಯಡಿಯೂರಪ್ಪ. ಯೋಗೇಶ್ವರ್ ಮಾತು ಕೇಳಿ ಚಂದ್ರಶೇಖರ್ ಅವರನ್ನು ಬಿಜೆಪಿಗೆ ಸೇರಿಸಿಕೊಂಡರು. ಪರಿಣಾಮ ಈಗ ನಮ್ಮ ಅಭ್ಯರ್ಥಿಯೇ ಕಣದಿಂದ ಹಿಂದಕ್ಕೆ ಸರಿದಿದ್ದಾರೆ ಎಂದು ಬಿಜೆಪಿಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ ಎಲ್ ಸಂತೋಷ್ ಬಣ ದೂರು ಕೊಟ್ಟಿದೆ ಎಂದು ಮೂಲಗಳು ತಿಳಿಸಿವೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ