ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರ: ಜಿ. ಪರಮೇಶ್ವರ್ ಸ್ಪಷ್ಟನೆ

ಸೋಮವಾರ, 10 ಏಪ್ರಿಲ್ 2017 (12:01 IST)
ಬೆಂಗಳೂರು: ನನಗೆ ಸಚಿವ ಸ್ಥಾನವೂ ಮುಖ್ಯ, ಕೆಪಿಸಿಸಿ ಹುದ್ದೆಯೂ ಮುಖ್ಯ. ಹಾಗಂತ ಅದಕ್ಕಾಗಿ ಹಠ ಮಾಡಲ್ಲ. ಹೈಕಮಾಂಡ್ ಏನು ಹೇಳುತ್ತದೋ ಹಾಗೇ ನಡೆದುಕೊಳ್ಳುತ್ತೇನೆ ಎಂದು ಗೃಹಸಚಿವ ಜಿ. ಪರಮೇಶ್ವರ್ ಹೇಳಿಕೊಂಡಿದ್ದಾರೆ.

 
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಬೇರೊಬ್ಬರನ್ನು ಆಯ್ಕೆ ಮಾಡುವ ಬಗ್ಗೆ ಮಾತನಾಡಿದ ಅವರು ಈ ರೀತಿ ಪ್ರತಿಕ್ರಿಯಿಸಿದ್ದಾರೆ. 2018 ರ ಚುನಾವಣೆಯಲ್ಲಿ ಮತ್ತೆ ಕಾಂಗ್ರೆಸ್ ನ್ನು ಅಧಿಕಾರಕ್ಕೆ ತರಬೇಕು ಎನ್ನುವುದೇ ನನ್ನ ಗುರಿ ಎಂದು ಅವರು ಈ ಸಂದರ್ಭದಲ್ಲಿ ಹೇಳಿದ್ದಾರೆ.

ಉಪಚುನಾವಣೆಯಲ್ಲೂ ಕಾಂಗ್ರೆಸ್ ಜಯಭೇರಿ ಭಾರಿಸಲಿದೆ. ಬಿಜೆಪಿಯ ಅಧಿಕಾರದ ಕನಸು ನನಸಾಗಲ್ಲ. ಕಾಂಗ್ರೆಸ್ ನ್ನು ಅಧಿಕಾರಕ್ಕೆ ತರಲು ಸತತವಾಗಿ ಪರಿಶ್ರಮ ಪಡುವೆ. ಅದರ ಹೊರತಾಗಿ ನನಗೆ ಯಾವ ಹುದ್ದೆ ನೀಡಬೇಕೆಂಬುದು ಹೈಕಮಾಂಡ್ ಗೆ ಬಿಟ್ಟಿದ್ದು ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ವೆಬ್ದುನಿಯಾವನ್ನು ಓದಿ