ಚಾರ್ಮಾಡಿ ಘಾಟಿಯಲ್ಲಿ ಮುಂದುವರಿದ ಪ್ರಯಾಣಿಕರ ಪರದಾಟ

ಮಂಗಳವಾರ, 12 ಜೂನ್ 2018 (11:27 IST)
ಬೆಂಗಳೂರು: ಭಾರೀ ಮಳೆಯಿಂದಾಗಿ ಚಾರ್ಮಾಡಿ ಘಾಟಿಯಲ್ಲಿ ಗುಡ್ಡ ಕುಸಿದು ವಾಹನ ಸಂಚಾರಕ್ಕೆ ವ್ಯತ್ಯಯವಾಗಿದೆ. ಈ ಹಿನ್ನಲೆಯಲ್ಲಿ ಪ್ರಯಾಣಿಕರು ಪರದಾಡುತ್ತಿದ್ದಾರೆ.

ನಿನ್ನೆ ಸಂಜೆಯಿಂದಲೇ ಇಲ್ಲಿ ಸಾಲುಗಟ್ಟಿ ನಿಂತಿರುವ ವಾಹನಗಳಲ್ಲಿರುವ ಪ್ರಯಾಣಿಕರು ಹಸಿವು, ಬಾಯಾರಿಕೆಗಳಿಂದ ಬಳಲುತ್ತಿದ್ದಾರೆ. ವಾಹನಗಳಲ್ಲಿರುವ ಮಕ್ಕಳು ಪೋಷಕರ ಬಳಿ ತಿಂಡಿ-ಹಾಲು ಬೇಕೆಂದು ರಚ್ಚೆ ಹಿಡಿಯುತ್ತಿರುವ ದೃಶ್ಯ ಸಾಮಾನ್ಯವಾಗಿದೆ.

ಈಗಾಗಲೇ ತೆರವು ಕಾರ್ಯಾಚಾರಣೆ ಭರದಿಂದ ಸಾಗುತ್ತಿದ್ದು, ಎರಡು ಜೆಸಿಬಿಗಳನ್ನು ಬಳಸಿ ರಸ್ತೆ ತೆರವುಗೊಳಿಸಲಾಗುತ್ತಿದೆ. ಸಿಬ್ಬಂದಿ ಜತೆಗೆ ಸ್ಥಳೀಯರೂ ಕೈಗೂಡಿಸುತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ