ವರ್ತೂರು ಬಳಿಯ ವಿಬ್ಗಯಾರ್ ಶಾಲೆಗೆ ನುಗ್ಗಿ ಇಬ್ಬರನ್ನು ಗಾಯಗೊಳಿಸಿದ ಚಿರತೆಯನ್ನು ಸೆರೆಹಿಡಿಯಲಾಗಿತ್ತು. ಬೋನಿನಿಂದ ತಪ್ಪಿಸಿಕೊಂಡಿರುವ ಚಿರತೆ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನಕ್ಕೆ ಹೋಗಿದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಬೋನಿನಿಂದ ತಪ್ಪಿಸಿಕೊಂಡಿದ್ದ ಚಿರತೆ ಸುತ್ತಮುತ್ತಲ ಹಳ್ಳಿಗಳಿಗೆ ನುಗ್ಗದಂತೆ ಅರಣ್ಯ ಇಲಾಖೆ ಸಿಬ್ಬಂದಿ ಕಟ್ಟೆಚ್ಚರ ವಹಿಸಿ ಕೊನೆಗೂ ಚಿರತೆಯ ಹೆಜ್ಜೆಗುರುತಿನ ಜಾಡು ಹಿಡಿದರು.