ಕುಮಾರಸ್ವಾಮಿ ನಾಯಕರಂತೆ ವರ್ತಿಸಬೇಕು. ಲಘುವಾಗಿ ಹೇಳಿಕೆಯನ್ನು ನೀಡಿ ಗೊಂದಲ ಸೃಷ್ಟಿಸಬಾರದು ಎಂದು ಸಲಹೆ ಮಾಡಿದರು.ಪಕ್ಷ ಬಿಟ್ಟು ನಮಗೆ ಸ್ವಂತ ದುಡಿಮೆ ಮಾಡುವ ಶಕ್ತಿಯಿದೆ. ಕುಮಾರಸ್ವಾಮಿ ಹೇಳಿಕೆ ತೀವ್ರ ಬೇಸರ ತರಿಸಿದೆ ಎಂದರು. ಕಾಂಗ್ರೆಸ್ ಬಳಿ ಚರ್ಚಿಸಲು ದೇವೇಗೌಡರೇ ಸೂಚಿಸಿದ್ದರು. ಅದರಂತೆ ನಾವು ಪರಿಷತ್ ಚುನಾವಣೆಯಲ್ಲಿ ಹೊಂದಾಣಿಕೆ ಕುರಿತು ಚರ್ಚಿಸಿದ್ದೆವು. ದೇವೇಗೌಡರು ಯಾಕೆ ಹೀಗೆ ಹೇಳಿದ್ರು ಅಂತಾ ಗೊತ್ತಾಗಲಿಲ್ಲ ಎಂದು ಹೇಳಿದರು.
ಜೆಡಿಎಸ್ ಶಾಸಕ ಜಮೀರ್ ಅಹ್ಮದ್ ವಿರುದ್ಧ ನಿನ್ನೆ ಪರೋಕ್ಷವಾಗಿ ವಾಗ್ದಾಳಿ ಮಾಡಿದ್ದ ಕುಮಾರಸ್ವಾಮಿ ಅವರು ಯಾವ ಪಕ್ಷಕ್ಕೆ ಏಜೆಂಟ್ ಅಂತ ಗೊತ್ತಿಲ್ಲ. ಇಂತಹ ಹುಡುಗಾಟಿಕೆ ಮಾಡಿದರೆ ಶಿಸ್ತಿನ ಕ್ರಮ ಕೈಗೊಳ್ಳಬೇಕಾಗುತ್ತದೆ. ಮೂರು, ನಾಲ್ಕು ಜನರಿಗೋಸ್ಕರ ಪಕ್ಷವನ್ನು ಬಲಿಕೊಡಲು ಆಗುವುದಿಲ್ಲ. ಇನ್ನು ಮುಂದಿನ ದಿನಗಳಲ್ಲಿ ನಾಲ್ಕು ಗೋಡೆಗಳ ನಡುವೆ ಇಂತಹ ವಿಷಯ ಚರ್ಚೆ ಮಾಡಲಿ. ಆದರೆ ಸಾರ್ವಜನಿಕ ವೇದಿಕೆಯಲ್ಲಿ ಚರ್ಚೆ ಮಾಡಿದರೆ ನಾನು ಉತ್ತರ ಕೊಡುತ್ತೇನೆ ಎಂದು ಕುಮಾರಸ್ವಾಮಿ ಹೇಳಿದರು.