ಕೋವಿಡ್ ನಿಂದ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ವಿತರಣೆ

ಭಾನುವಾರ, 19 ಡಿಸೆಂಬರ್ 2021 (14:39 IST)
ಬೆಂಗಳೂರಿನ ಗೋವಿಂದರಾಜ ನಗರ ಕ್ಷೇತ್ರದಲ್ಲಿ ಕೋವಿಡ್ ನಿಂದ ಮೃತಪಟ್ಟ ಕುಟುಂಬಗಳಿಗೆ ಸಚಿವ ವಿ. ಸೋಮಣ್ಣ ಪರಿಹಾರದ ಚೆಕ್ ವಿತರಣೆ ಮಾಡಿದ್ದಾರೆ. ಕ್ಷೇತ್ರದ ಚಂದ್ರಾ ಲೇಔಟ್ ನ ಪೇಜಾವರ ಶ್ರೀ & ವಿಶ್ವೇಶ ತೀರ್ಥ ಸ್ವಾಮೀಜಿ ರಂಗಮಂದಿರ ದಲ್ಲಿ ಪರಿಹಾರದ ಚೆಕ್ & ಮಂಜೂರಾತಿ ಪ್ರಮಾಣ ಪತ್ರವನ್ನು ವಿತರಿಸಿದರು.ಬಳಿಕ ಮಾತನಾಡಿದ ಅವರು, ಕೋವಿಡ್ ನಿಂದ ಮೃತಪಟ್ಟವರ ನೆನಪು ತುಂಬಾ ದುಖಃ ತಂದಿದೆ. ಹೀಗಾಗಿ ಸರ್ಕಾರದ ವತಿಯಿಂದ ಮೃತರ ಕುಟುಂಬದ ನೆರವಿಗಾಗಿ ಇಂತಿಷ್ಟು ಹಣವನ್ನು ನೀಡಲಾಗುತ್ತಿದೆ ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಮಾಜಿ ಬಿಬಿಎಂಪಿ ಕಾರ್ಪೋರೇಟರ್ ಗಳು, ಫಲಾನುಭವಿಗಳು, & ಸ್ಥಳೀಯರು ಉಪಸ್ಥಿತರಿದ್ದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ