‘ಮುಖ್ಯಮಂತ್ರಿ ಕುಮಾರಸ್ವಾಮಿ ಬದಲಾವಣೆ ಇಲ್ಲವೇ ಇಲ್ಲ'

ಸೋಮವಾರ, 8 ಜುಲೈ 2019 (19:03 IST)
ಮಹತ್ವದ ಬೆಳವಣಿಗೆಯೊಂದರಲ್ಲಿ ನಡೆದ ಕಾಂಗ್ರೆಸ್ ಸಚಿವರ ಸಭೆಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಬದಲಾವಣೆ ಬಗ್ಗೆ ಯಾವ ಬಗೆಯೂ ಚರ್ಚೆ ನಡೆಸಲಾಗಿಲ್ಲ.

ಮುಖ್ಯಮಂತ್ರಿ ಸ್ಥಾನದಿಂದ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಬದಲಾವಣೆ ಮಾಡುವ ಚರ್ಚೆಯೇ ಆಗಿಲ್ಲ. ಹೀಗಂತ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ.

ಡಾ.ಜಿ.ಪರಮೇಶ್ವರ್ ನಿವಾಸದಲ್ಲಿ ನಡೆದ ಸಚಿವರ ಸಭೆಯ ಬಳಿಕ ಮಾತನಾಡಿದ ಅವರು, ಮೈತ್ರಿ ಸರಕಾರಕ್ಕೆ ಯಾವುದೇ ರೀತಿಯಲ್ಲಿ ಧಕ್ಕೆ ಆಗೋದಿಲ್ಲ. ಸ್ವಯಂ ಪ್ರೇರಿತವಾಗಿ ನಾವೆಲ್ಲ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾಗಿ ತಿಳಿಸಿದ್ರು.

ಮುಖ್ಯಮಂತ್ರಿಯೊಂದಿಗೆ ಸಿದ್ದರಾಮಯ್ಯ, ವೇಣುಗೋಪಾಲ್, ಡಾ.ಪರಮೇಶ್ವರ್ ಚರ್ಚೆ ನಡೆಸಲಿದ್ದಾರೆ. ರಾಜಕೀಯ ಸದ್ಯದ ಸನ್ನಿವೇಶವನ್ನು ಹಿರಿಯ ಮುಖಂಡರು ಪರಿಹರಿಸಲಿದ್ದಾರೆ ಎಂದ್ರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ