ವಸತಿ ಸಚಿವ ಅಂಬರೀಶ್ ಅವರನ್ನು ಸಂಪುಟದಿಂದ ಕೈ ಬಿಟ್ಟಿದ್ದರಿಂದ ಒಕ್ಕಲಿಗ ಸಮುದಾಯದ ಕೋಟಾದಡಿ ಕೃಷ್ಣಪ್ಪ ಅವರಿಗೆ ಸಚಿವ ಸ್ಥಾನ ದೊರೆಯುತ್ತಿದೆ. ಕಳೆದ ಬಾರಿ ಕೃಷ್ಣಪ್ಪ ಅವರಿಗೆ ಸಚಿವ ಸ್ಥಾನ ಕೈತಪ್ಪಿದಾಗ ಅವರ ಬೆಂಬಲಿಗರು ವಿಜಯನಗರ ಸುತ್ತಮುತ್ತ ಭಾರಿ ಪ್ರತಿಭಟನೆ ನಡೆಸಿದ್ದರು. ಈ ಮಧ್ಯೆ ಕೃಷ್ಣಪ್ಪ ಅವರಿಗೆ ವಸತಿ ಮತ್ತು ವಾರ್ತಾ ಖಾತೆ ನೀಡಲು ಸಿಎಂ ನಿರ್ಧರಿಸಿದ್ದಾರೆ ಎಂದು ಹೇಳಲಾಗಿದೆ.