ಯಲಹಂಕಾ ಕ್ಷೇತ್ರದ ಬಿಜೆಪಿ ಕಾರ್ಯಕ್ರಮದಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಮುಖ್ಯಮಂತ್ರಿ ಸಿದ್ದರಾಮಯ್ಯ ತೊಘಲಕ್ ದರ್ಬಾರ ನಡೆಸುತ್ತಿದ್ದಾರೆ. ಅವರಿಗೆ ರಾಜ್ಯದ ಅಭಿವೃದ್ಧಿ ಬೇಡ ಎಂದು ರಾಜ್ಯ ಸರಕಾರದ ವಿರುದ್ಧ ಗುಡುಗಿದ್ದಾರೆ.
ಸಮಾರಂಭದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ ಎಂದು ಹೇಳುವುದು ಸತ್ಯಕ್ಕೆ ದೂರವಾಗಿದೆ. ಕೇಂದ್ರ ಸಚಿವ ಸದಾನಂದ ಗೌಡ ಅವರಿಗೆ ಪಕ್ಷದ ಕುರಿತು ಯಾವುದೇ ಅಸಮಾಧಾನವಿಲ್ಲ. ಆದರೆ, ಪರಿಷತ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪನವರಲ್ಲಿ ಅಸಮಾಧಾನವಿದೆ. ಅವರೊಂದಿಗೆ ಚರ್ಚೆ ನಡೆಸುತ್ತೇನೆ ಎಂದು ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.