ವಿದ್ಯುತ್ ಪ್ರವಹಿಸುತ್ತಿದ್ದ ಹೈ ಟೆನ್ಷನ್ ತಂತಿಯನ್ನು ತುಳಿದ ಬಾಲಕನೋರ್ವ ಧಾರುಣವಾಗಿ ಸಾವನ್ನಪ್ಪಿರುವ ಘಟನೆ ನಗರದ ಹೆಚ್ಎಸ್ಆರ್ ಲೇಔಟ್ನಲ್ಲಿ ನಡೆದಿದೆ.
ಘಟನೆಯಲ್ಲಿ ಸಾವನ್ನಪ್ಪಿದ ಬಾಲಕನ್ನು ಪುನಿತ್(12) ಎಂದು ಗುರುತಿಸಲಾಗಿದ್ದು, ಇಲ್ಲಿನ ಹೊಸಪಾಳ್ಯದ ನಿವಾಸಿ ಎಂದು ತಿಳಿದು ಬಂದಿದೆ.
ಪ್ರಕರಣದ ಹಿನ್ನೆಲೆ: ವಿದ್ಯತ್ ತಂತಿ ತುಂಡಾಗಿ ಬಿದ್ದಿತ್ತು. ಆದರೆ ಅದನ್ನು ಗಮನಿಸದ ಬಾಲಕ ಆಟವಾಡುತ್ತಾ ಆಕಸ್ಮಿಕವಾಗಿ ತಂತಿಯನ್ನು ತುಳಿದಿದ್ದಾನೆ. ಈ ಹಿನ್ನೆಲೆಯಲ್ಲಿ ವಿದ್ಯತ್ ಪ್ರವಹಿಸಿದ ಪರಿಣಾಮ ಬಾಲಕ ಸ್ಳಳದಲ್ಲಿಯೇ ಸಾವನ್ನಪ್ಪಿದ್ದಾನೆ.
ಹೆಚ್ಎಸ್ಆರ್ ಲೇಔಟ್ನ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿಸಲಾಗಿದೆ.