ಬೆಂಗಳೂರಿನಲ್ಲಿ ದೀಪಾವಳಿ ಪಟಾಕಿ ಸಾಕಷ್ಟು ಅವಾಂತರಗಳನ್ನು ಸೃಷ್ಟಿಸಿದೆ. ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದರೂ ಗಾಯಗೊಂಡು ಆಸ್ಪತ್ರೆಗೆ ಸೇರಿದವರ ಮಕ್ಕಳ ಸಂಖ್ಯೆ 25ಕ್ಕೇರಿದೆ. ಒಟ್ಟು ನಾಲ್ಕು ಜನರಿಗೆ ಕಣ್ಣಿನ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಇಬ್ಬರು ಮಕ್ಕಳ ಎರಡೂ ಕಣ್ಣುಗಳಿಗೆ ಗಾಯವಾಗಿದ್ದು, ಸಂಪೂರ್ಣವಾಗಿ ಕಣ್ಣು ಕಳೆದುಕೊಳ್ಳುವ ಸಂಭವವಿದ್ದು, ಕತ್ತಲಿನ ಅಂಧಕಾರ ಕವಿಯುವ ಭಯ ಆವರಿಸಿದೆ.