ಅಕ್ರಮವಾಗಿ ರಕ್ತ ಚಂದನವನ್ನು ಸಾಗಿಸುತ್ತಿದ್ದಾರೆ ಎಂಬ ಆರೋಪ ಹಿನ್ನೆಲೆಯಲ್ಲಿ ಆಂಧ್ರ ಪ್ರದೇಶದ ಸ್ಪೆಷಲ್ ಟಾಸ್ಕ್ ಸಿಬ್ಬಂದಿಗಳು ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯ ಶೇಷಾಚಲಂ ಹಾಗೂ ಶ್ರೀವಾರಿ ಎಂಬ ಅರಣ್ಯ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿದ್ದರು. ಈ ಕಾರ್ಯಚರಣೆಯು ಉದ್ವಿಘ್ನ ಪರಿಸ್ಥಿತಿಗೆ ತಲುಪಿದ ಹಿನ್ನೆಲೆಯಲ್ಲಿ ಪೊಲೀಸರು ಎನ್ಕೌಂಟರ್ಗೆ ಮುಂದಾದರು. ಪರಿಣಾಮ ಘಟನೆಯಲ್ಲಿ 20 ಮಂದಿ ಮರಸಾಗಣೆ ಮಾಡುತ್ತಿದ್ದ ಕಳ್ಳರು ಬಲಿಯಾಗಿದ್ದರು. ಸಾವನ್ನಪ್ಪಿದ ಎಲ್ಲಾ ಸ್ಮಗ್ಲರ್ಸ್ ಕೂಡ ತಮಿಳುನಾಡು ಮೂಲದವರು ಎನ್ನಲಾಗುತ್ತಿದ್ದು, ಪ್ರಕರಣ ಸಂಬಂಧ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ರಾಜನಾಥ್ ಸಂಪೂರ್ಣ ವರದಿ ಕೇಳಿದ್ದಾರೆ.