ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪಾಟ್ನಾದ ಗಾಂಧಿ ಮೈದಾನದಲ್ಲಿ 2013ರ ಅ.27ರಂದು ಪ್ರಚಾರ ರ್ಯಾಲಿ ನಡೆಸುತ್ತಿದ್ದ ಸಂಧರ್ಭದಲ್ಲಿ 10 ಬಾಂಬ್ ಸ್ಫೋಟಗೊಂಡಿದ್ದವು. ಈ ವೇಳೆ, ಐವರು ಮೃತಪಟ್ಟು 83 ಮಂದಿ ಗಾಯಗೊಂಡಿದ್ದರು. ಪ್ರಕರಣ ಸಂಬಂಧ ಎನ್ಐಎ ಅಧಿಕಾರಿಗಳು ಹಲವು ಆರೋಪಿಗಳನ್ನು ಬಂಧಿಸಿದ್ದರು.