ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ತನಿಖಾ ವರದಿ ನನ್ನ ಕೈ ಸೇರಿಲ್ಲ, ಹಾಗೂ ತನಿಖಾ ವರದಿ ಸೋರಿಕೆಯೂ ಆಗಿಲ್ಲ. ಪ್ರಕರಣ ಕುರಿತಂತೆ ಸಿಐಡಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ತನಿಖೆಯಲ್ಲಿ ರಾಜ್ಯ ಸರಕಾರ ಮೂಗು ತೂರಿಸಲ್ಲ ಎಂದು ತಿಳಿಸಿದ್ದಾರೆ.