ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಖಡಕ್ ಎಚ್ಚರಿಕೆ

ಗುರುವಾರ, 9 ಫೆಬ್ರವರಿ 2023 (20:26 IST)
ಪೊಲೀಸರ ಮೇಲೆ ಸುಳ್ಳು ಆರೋಪ ಮಾಡಿದರೆ  ಕ್ರಮ ಅನಿವಾರ್ಯ ಎಂದು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಖಡಕ್ ಎಚ್ಚರಿಕೆ ನೀಡಿದ್ದಾರೆ.ನಮ್ಮ ಸಿಬ್ಬಂದಿಯಿಂದ ಅನುಚಿತ ವರ್ತನೆ ಇದ್ದರೆ ಕ್ರಮ ಕೈಗೊಳ್ಳುತ್ತೇವೆ.ಬೇಕಂತಲೇ ಪೊಲೀಸರ ಮೇಲೆ ಆರೋಪ ಮಾಡಿದ್ರೆ ಕ್ರಮ ಕೈಗೊಳ್ಳಲಾಗುವುದು.ಪೊಲೀಸರ ರಕ್ಷಣೆ ದೃಷ್ಟಿಯಿಂದ ಇದು ಅನಿವಾರ್ಯವಾಗಿದೆ.ಕೆಲವರು ಪೊಲೀಸರ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದಾರೆ.ಇದರಿಂದ ಪೊಲೀಸರು, ಸಾರ್ವಜನಿಕರು ಸಮಯ ವ್ಯರ್ಥವಾಗುತ್ತೆ.ನಾವು ಜನಸ್ನೇಹಿಯಾಗಿ ಕೆಲಸ ಮಾಡಲು ಸಹಕರಿಸಿ ಎಂದು ಸಾರ್ವಜನಿಕರಿಗೆ ಕಮಿಷನರ್ ಮನವಿ ಮಾಡಿಕೊಂಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ