ದೇವೇಗೌಡ ಹಾಗೂ ಸಿದ್ದರಾಮಯ್ಯನವರನ್ನು ಹಾವು ಮುಂಗುಸಿಗೆ ಹೋಲಿಸಿ ವ್ಯಂಗ್ಯವಾಡಿದ ಸಿಟಿ ರವಿ

ಭಾನುವಾರ, 21 ಅಕ್ಟೋಬರ್ 2018 (08:36 IST)
ಬೆಂಗಳೂರು : ಮಾಜಿ ಪ್ರಧಾನಿ ಎಚ್‍ಡಿ ದೇವೇಗೌಡ, ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಹಾಲಿ ಸಿಎಂ ಕುಮಾರಸ್ವಾಮಿ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿರುವ ಬಗ್ಗೆ ಇದೀಗ ಶಾಸಕ ಸಿಟಿ ರವಿ ವ್ಯಂಗ್ಯವಾಡಿದ್ದಾರೆ.


ನಗರದಲ್ಲಿ ಏರ್ಪಡಿಸಿದ್ದ ಮತ್ತೆ ಮೋದಿ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಟಿ ರವಿಹಿಂದೆ ದೇವೇಗೌಡರು ಇಂತ ನೀಚ ಮುಖ್ಯಮಂತ್ರಿಯನ್ನ ನೋಡಿಲ್ಲ ಎಂದಿದ್ದರು. ಅಲ್ಲದೇ ಇಂತವರನ್ನ ಬೆಳೆಸಿ ತಪ್ಪು ಮಾಡಿದೆ ಎಂದು ಆರೋಪಿಸಿದ್ದರು. ಆದರೆ ಈಗ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಹಾವು ಮುಂಗುಸಿ ಗುಣ ಸದಾ ಕಿತ್ತಾಡೋದು. ಈಗ ಕಿತ್ತಾಡುವವರು ಮೋದಿ ಭಯಕ್ಕಾಗಿ ಒಂದಾಗಿದ್ದಾರೆ. ಸ್ವಲ್ಪ ದಿನ ಅವರ ಗುಣದಂತೆ ಕಿತ್ತಾಡಿಕೊಂಡೇ ವಾಪಸ್ ಬರ್ತಾರೆ ಎಂದು ವ್ಯಂಗ್ಯವಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ