BJP- ‘ಕೈ’ ಕಾರ್ಯಕರ್ತರ ಚಕಮಕಿ

ಬುಧವಾರ, 9 ನವೆಂಬರ್ 2022 (17:20 IST)
ಕಲಬುರಗಿಯ ಚಿತ್ತಾಪುರ ಕ್ಷೇತ್ರದಲ್ಲಿ ಶಾಸಕ ಪ್ರಿಯಾಂಕ್ ಖರ್ಗೆ ಕಾಣೆಯಾಗಿದ್ದಾರೆ ಎಂದು BJP ಪೋಸ್ಟರ್​​​​ ಅಂಟಿಸಿತ್ತು. ಇದು BJP ಮತ್ತು ಕಾಂಗ್ರೆಸ್​​​​​ ಕಾರ್ಯಕರ್ತರ ನಡುವೆ ಕಿತ್ತಾಟಕ್ಕೆ ಕಾರಣವಾಗಿದೆ. ಪೋಸ್ಟರ್​ ವಿಚಾರವಾಗಿ ಕಾಂಗ್ರೆಸ್, BJP ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಚಿತ್ತಾಪುರ ಕ್ಷೇತ್ರದ ವಾಡಿ ಪಟ್ಟಣದ ಪೊಲೀಸ್ ಠಾಣೆ ಎದುರು ಲಾಠಿ ಚಾರ್ಜ್ ನಡೆದಿದೆ. ಬಿಜೆಪಿ ಮುಖಂಡ ಅರವಿಂದ್ ಚೌವ್ಹಾಣ್ ಶಾಸಕ ಪ್ರಿಯಾಂಕ್ ಖರ್ಗೆ ಕಾಣೆಯಾಗಿದ್ದಾರೆ ಎಂಬ ಪೋಸ್ಟರ್​ಗಳನ್ನು ತಾಲೂಕಿನಾದ್ಯಂತ ಅಂಟಿಸಿದ್ರು. ​ಇದಕ್ಕೆ ಸಿಟ್ಟಿಗೆದ್ದ ಕಾಂಗ್ರೆಸ್​ ಕಾರ್ಯಕರ್ತರು BJP  ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿದ್ದಾರೆ. ಈ ಕುರಿತು ಪೊಲೀಸ್​​​​​​​​​​​​​​​​ ಠಾಣೆಗೆ ದೂರು ನೀಡಲು BJP ಕಾರ್ಯಕರ್ತರು ಬಂದಿದ್ದು, ಇದೇ ವೇಳೆ ಕಾಂಗ್ರೆಸ್​​​ ಕಾರ್ಯಕರ್ತರು ಕೂಡ ಠಾಣೆಗೆ ಎಂಟ್ರಿ ಕೊಟ್ಟಿದ್ದಾರೆ. ಬಳಿಕ ಎರಡು ಗುಂಪಿನ ನಡುವೆ ಮಾತಿನ ಚಕಮಕಿ ಉಂಟಾಗಿದೆ. ಠಾಣೆ ಮುಂದೆ ಜಮಾಯಿಸಿದ್ದ BJP, ಕಾಂಗ್ರೆಸ್ ಕಾರ್ಯಕರ್ತರನ್ನು ಚದುರಿಸಲು ಪೊಲೀಸರು ಲಘು ಲಾಠಿ ಚಾರ್ಜ್​​​​​ ನಡೆಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ