ಮಂಗಳೂರಿನ ಕೊಲೆಗೆ ಸಚಿವ ರೈ, ಸಿಎಂ ಜವಾಬ್ದಾರರು: ಯಡಿಯೂರಪ್ಪ

ಸೋಮವಾರ, 10 ಜುಲೈ 2017 (12:34 IST)
ಮಂಗಳೂರಿನಲ್ಲಿ ನಡೆದ ಕೊಲೆಗೆ ಸಚಿವ ರಮಾನಾಥ್ ರೈ ಮತ್ತು ಸಿಎಂ ಸಿದ್ದರಾಮಯ್ಯ ಜವಾಬ್ದಾರರಾಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಗಂಭೀರ ಆರೋಪ ಮಾಡಿದ್ದಾರೆ.
 
ಮಂಗಳೂರಿನಲ್ಲಿ ನಡೆದ ಗಲಭೆಯ ಹಿಂದೆ ಸಚಿವ ರಮಾನಾಥ್ ರೈ ಪಿತೂರಿಯಿದೆ. ಸಚಿವರಿಂದಲೇ ಗಲಭೆಗೆ ಕುಮ್ಮಕ್ಕು ನೀಡಲಾಗಿದೆ. ಸಚಿವ  ರೈ ಒಂದು ತಿಂಗಳು ಮಂಗಳೂರಿಗೆ ಹೋಗದಿದ್ದರೆ ಶಾಂತಿ ನೆಲೆಸುತ್ತದೆ ಎಂದು ವಾಗ್ದಾಳಿ ನಡೆಸಿದ್ದಾರೆ.
 
ಶೋಭಾ ಕರಂದ್ಲಾಜೆ ಅನ್ಯಾಯದ ವಿರುದ್ಧ ಹೋರಾಡಿದ್ದಾರೆ. ಅನ್ಯಾಯದ ವಿರುದ್ಧ ಹೋರಾಡಿದಕ್ಕೆ ಅವರ ಮೇಲೆ ಮತ್ತು ಸಂಸದ ನಳಿನ್ ಕುಮಾರ್ ಕಟೀಲ್ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಗುಡುಗಿದ್ದಾರೆ.
 
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಯೋಗ್ಯತೆಯಿಲ್ಲ. ಸಂಸದರ ಮೇಲೆ ಎಫ್‌ಐಆರ್ ದಾಖಲಿಸುವ ಮೂಲಕ ಸಿಎಂ ಸಿದ್ದರಾಮಯ್ಯ ಕೀಳುಮಟ್ಟಕ್ಕೆ ಇಳಿದಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ