ಸಿದ್ದಗಂಗಾ ಶ್ರೀ ಹೆಸರಲ್ಲಿ ಯೋಜನೆ ಘೋಷಣೆ ಮಾಡಿದ ಸಿಎಂ!

ಗುರುವಾರ, 31 ಜನವರಿ 2019 (19:58 IST)
ನಡೆದಾಡುವ ದೇವರು ಖ್ಯಾತಿಯ ಡಾ. ಶಿವಕುಮಾರ ಸ್ವಾಮೀಜಿಯವರ ಹೆಸರು ಅಮರವಾಗಿ ಉಳಿಸಲು ಹಲವು ಯೋಜನೆಗಳನ್ನು ಜಾರಿ ಮಾಡಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಯೋಜನೆಗಳ ಕುರಿತು ಈಗಾಗಲೇ ಸಚಿವ ಸಂಪುಟದಲ್ಲಿ ಚರ್ಚೆ ನಡೆಸಲಾಗಿದ್ದು, ಬಜೆಟ್ನಲ್ಲಿ ಹೊಸ ಯೋಜನೆಗಳನ್ನು ಪ್ರಕಟಿಸಲಾಗುವುದು ಎಂದರು.

ತುಮಕೂರು ಸಿದ್ದಗಂಗೆಯ ಗೋಸಲ ಸಿದ್ದೇಶ್ವರ ವೇದಿಕೆಯಲ್ಲಿ ನಡೆದ ಲಿಂ. ಡಾ. ಶಿವಕುಮಾರ ಸ್ವಾಮೀಜಿ ಅವರ ಪುಣ್ಯ ಸ್ಮರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕುಮಾರಸ್ವಾಮಿ, ಸಿದ್ದಗಂಗಾ ಶ್ರೀಗಳು ಧಾರ್ಮಿಕ, ಶೈಕ್ಷಣಿಕ ಕ್ಷೇತ್ರಕ್ಕೆ ಸಲ್ಲಿಸಿರುವ ಸೇವೆ ಅಪಾರವಾಗಿದೆ. ಶ್ರೀಗಳ ಸೇವೆ ಬಗ್ಗೆ ಪದ ಬಳಕೆ ಮಾಡುವ ಶಕ್ತಿ ನಮಗಿಲ್ಲ ಎಂದರು.

ಸ್ವಾಮೀಜಿಯವರು ಜನಿಸಿದ ಮಾಗಡಿ ತಾಲ್ಲೂಕು ವೀರಾಪುರ ಗ್ರಾಮವನ್ನು ಮಾದರಿ ಗ್ರಾಮವನ್ನಾಗಿ ಮಾಡುವುದಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಇದೇ ಸಂದರ್ಭದಲ್ಲಿ ಘೋಷಿಸಿದರು.  


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ