ಮಾರ್ಗಸೂಚಿ ಪಾಲಿಸಿ ಸರ್ಕಾರದೊಂದಿಗೆ ಸಹಕರಿಸಿ ಸಿಎಂ ಬಿಎಸ್ ಯಡಿಯೂರಪ್ಪ ಮನವಿ

ಬುಧವಾರ, 28 ಏಪ್ರಿಲ್ 2021 (12:03 IST)
ಬೆಂಗಳೂರು : ಮಾರ್ಗಸೂಚಿ ಪಾಲಿಸಿ ಸರ್ಕಾರದೊಂದಿಗೆ ಸಹಕರಿಸಿ ಎಂದು ಟ್ವೀಟರ್ ನಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಮನವಿ ಮಾಡಿದ್ದಾರೆ.

ರಾಜ್ಯದಲ್ಲಿ ಕೊರೊನಾ 2ನೇ ಅಲೆ ಭಾರೀ ಕೋಲಾಹಲ ಸೃಷ್ಟಿಸಿದ್ದು, ದಿನೇ ದಿನೇ ಸಾವು, ನೋವು ಹೆಚ್ಚಾಗುತ್ತಿದೆ. ಈ ಹಿನ್ನಲೆಯಲ್ಲಿ ರಾಜ್ಯಸರ್ಕಾರ 14 ದಿನಗಳ ಕಾಲ ಲಾಕ್ ಡೌನ್ ಘೋಷಿಸಿದೆ.

ಈ ಹಿನ್ನಲೆಯಲ್ಲಿ ಇದೀಗ ರಾಜ್ಯದ ಜನರಲ್ಲಿ ಸಿಎಂ ಯಡಿಯೂರಪ್ಪ ಮನವಿ ಮಾಡಿದ್ದು, ಕೊರೊನಾ ನಿಯಂತ್ರಣಕ್ಕಾಗಿ ನಿರ್ಬಂಧ ವಿಧಿಸಿಕೊಳ್ಳಿ. 2 ವಾರಗಳ ನಿರ್ಬಂಧದಲ್ಲಿ ಮನೆಯಲ್ಲೇ ಇರಿ. ತುರ್ತು ಸೇವೆ ಇದ್ರೆ ಮಾತ್ರ ಹೊರಗೆ ಬನ್ನಿ. ನಾವೆಲ್ಲಾ ಒಂದಾಗಿ ಕೊರೊನಾ ಮಣಿಸೋಣ ಎಂದು ಸಲಹೆ ನೀಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ