ಹೈಕಮಾಂಡ್ ನಿರ್ಧಾರವೇ ಅಂತಿಮ: ನಿರ್ಗಮನದ ಬಗ್ಗೆ ಸಿಎ ಬಿಎಸ್ ವೈ ಸುಳಿವು

ಬುಧವಾರ, 21 ಜುಲೈ 2021 (10:39 IST)
ಬೆಂಗಳೂರು: ಸಿಎಂ ಯಡಿಯೂರಪ್ಪ ತಮ್ಮ ಕುರ್ಚಿ ತ್ಯಾಗ ಮಾಡುವ ಬಗ್ಗೆ ಸುಳಿವೊಂದನ್ನು ನೀಡಿದ್ದಾರೆ. ಈ ಬಗ್ಗೆ ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದಿದ್ದಾರೆ.


ಈ ಮೊದಲಿನಿಂದಲೂ ಯಡಿಯೂರಪ್ಪ ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎನ್ನುತ್ತಲೇ ಬಂದಿದ್ದಾರೆ. ಇದೀಗ ಮತ್ತೆ ಅದೇ ಮಾತನ್ನು ಪುನರುಚ್ಚರಿಸಿದ್ದಾರೆ.

ಈ ನಡುವೆ ಯಡಿಯೂರಪ್ಪ ಪದತ್ಯಾಗ ಮಾಡಿದರೆ ನಾವು ಸುಮ್ಮನಿರಲ್ಲ ಎಂದು ವಿವಿಧ ಮಠಾಧೀಶರು, ಲಿಂಗಾಯತ ಸಮುದಾಯ ಬೆಂಬಲ ಸೂಚಿಸಿದೆ. ಆದರೆ ಬಿಎಸ್ ವೈ ಈ ಬಗ್ಗೆ ಯಾವುದೇ ಬಹಿರಂಗ ಹೇಳಿಕೆ ನೀಡದೇ ಇರಲು ತೀರ್ಮಾನಿಸಿದ್ದಾರೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ