ನೆರೆ ಹಾನಿಗೆ ರಾಷ್ಟ್ರೀಯ ವಿಪತ್ತು ನಿಧಿಗಿಂತ ಹೆಚ್ಚುವರಿ ಪರಿಹಾರ ಘೋಷಿಸಿದ ಸಿಎಂ ಬಿಎಸ್ ವೈ

ಶನಿವಾರ, 12 ಅಕ್ಟೋಬರ್ 2019 (08:12 IST)
ಬೆಂಗಳೂರು : ನೆರೆ ಪ್ರದೇಶಗಳಲ್ಲಿ ಕೃಷಿ ಮತ್ತು ತೋಟಗಾರಿಕೆ ಬೆಳೆ ನಾಶಕ್ಕೆ ಹೆಚ್ಚುವರಿ ಪರಿಹಾರ ನೀಡುವುದಾಗಿ ಸಿಎಂ ಬಿ.ಎಸ್. ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.




ನೆರೆ ಕುರಿತಂತೆ ವಿಧಾನಸೌಧದಲ್ಲಿ ನಡೆದ ಚರ್ಚೆಯಲ್ಲಿ ಮಾನಾಡಿದ ಸಿಎಂ ಬಿ.ಎಸ್. ಯಡಿಯೂರಪ್ಪ, ಪ್ರವಾಹದಿಂದ ಹಾನಿಗೀಡಾಡದ ಕೃಷಿ, ನೀರಾವರಿ, ತೋಟಗಾರಿಕೆ ಬೆಳೆಗಳಿಗೆ ರಾಷ್ಟ್ರೀಯ ವಿಪತ್ತು ನಿಧಿಗಿಂತ ಹೆಚ್ಚುವರಿಯಾಗಿ 10 ಸಾವಿರ ರೂ.ಗಳ ಪರಿಹಾರ ನೀಡಲಾಗುವುದು ಎಂದು ಹೇಳಿದ್ದಾರೆ.


ಅಲ್ಲದೇ ನೆರೆಗೆ ತುತ್ತಾಗಿರುವ ಪ್ರದೇಶಗಳಲ್ಲಿ ಒಂದು ಮನೆಯಲ್ಲಿ ಅವಿಭಕ್ತ ಕುಟುಂಬಗಳ ಸದಸ್ಯರಿದ್ದರೂ ಕೂಡ ಅವರಿಗೆ  ಪ್ರತ್ಯೇಕ ಮನೆಗಳನ್ನು ನಿರ್ಮಿಸಿಕೊಳ್ಳಲು ಆರ್ಥಿಕ ನೆರವು ಹಾಗೂ ಶಾಲೆಗಳ ದುರಸ್ಥಿಗೆ 500 ಕೋಟಿ ರೂ. ನೆರವು ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ