ಶಾಲೆ ಆರಂಭದ ಬಗ್ಗೆ ಚರ್ಚಿಸಲು ನಾಳೆ ಸಚಿವರ ಸಭೆ ಕರೆದ ಸಿಎಂ

ಭಾನುವಾರ, 22 ನವೆಂಬರ್ 2020 (10:32 IST)
ಬೆಂಗಳೂರು : ಶಾಲೆ ಆರಂಭದ ಬಗ್ಗೆ ತೀರ್ಮಾನ ತೆಗೆದುಕೊಳ್ಳಲು ಸಿಎಂ ಬಿಎಸ್ ಯಡಿಯೂರಪ್ಪ ಸಭೆ ನಾಳೆ ಸಭೆ ಕರೆದಿದ್ದಾರೆ .

ನಾಳೆ ಮಧ್ಯಾಹ್ನ 12ಕ್ಕೆ ವಿಧಾನಸೌಧದಲ್ಲಿ ಸಿಎಂ ನೇತೃತ್ವದಲ್ಲಿ ಸಭೆ ನಡೆಯಲಿದೆ. ಸಚಿವರು, ಅಧಿಕಾರಿಗಳ ಜತೆ ಸಿಎಂ ಸಭೆ ನಡೆಸಲಿದ್ದು, ನಾಳೆ ಶಾಲೆ, ಪಿಯು ಕಾಲೇಜು ಭವಿಷ್ಯ ನಿರ್ಧಾರವಾಗಲಿದೆ.

ಶಾಲೆ ಆರಂಭದ ಬಗ್ಗೆ ಸಚಿವರ ಜತೆ ಸಭೆಯಲ್ಲಿ ಚರ್ಚಿಸಲಿರುವ ಸಿಎಂ ಬಿಎಸ್ ಯಡಿಯೂರಪ್ಪ ಶಾಲೆ ತೆರೆಯಬೇಕೋ? ಬೇಡವೋ?  ಎಂದು ಚರ್ಚಿಸಲಿದ್ದಾರೆ. ಸಚಿವರ ಅಭಿಪ್ರಾಯ ಸಂಗ್ರಹಿಸಲಿದ್ದಾರೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ