ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Sampriya

ಸೋಮವಾರ, 9 ಜೂನ್ 2025 (19:04 IST)
ಹುಬ್ಬಳ್ಳಿ ಧಾರವಾಡ: ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ಐಪಿಎಲ್ ವಿಜಯೋತ್ಸವದ ಸಂದರ್ಭದಲ್ಲಿ 11 ಜನರ ಸಾವಿಗೆ ಕಾರಣವಾದ ಬೆಂಗಳೂರಿನ ಕಾಲ್ತುಳಿತದ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೋಮವಾರ ಕರ್ನಾಟಕ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. 

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ "ಬೇಜವಾಬ್ದಾರಿ ಮತ್ತು ಸಂವೇದನಾರಹಿತ" ವರ್ತನೆಯನ್ನು ಉಲ್ಲೇಖಿಸಿ ಜೋಶಿ ಅವರು ತಕ್ಷಣ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದರು. 

ವಿಜಯದ 24 ಗಂಟೆಗಳ ಒಳಗೆ ದೊಡ್ಡ ಪ್ರಮಾಣದ ಆಚರಣೆಗಳು ಅಪಾಯಕಾರಿ ಎಂದು ಉಪ ಪೊಲೀಸ್ ಆಯುಕ್ತರು (ಡಿಸಿಪಿ) ಎಚ್ಚರಿಸಿದ್ದರು ಎಂದು ಜೋಶಿ ಹೇಳಿದರು. 

ಇದರ ಹೊರತಾಗಿಯೂ, ಶಿವಕುಮಾರ್ ಪತ್ರವನ್ನು ನಿರ್ಲಕ್ಷಿಸಿ ಆಚರಣೆಗಳಲ್ಲಿ ಭಾಗವಹಿಸಿದರು. ಪೊಲೀಸ್ ಆಯುಕ್ತರು ಸಹ ಸಾಕಷ್ಟು ಸಿಬ್ಬಂದಿ ಇಲ್ಲದ ಕಾರಣ ಕಾರ್ಯಕ್ರಮವನ್ನು ಮುಂದೂಡಲು ವಿನಂತಿಸಿದ್ದರು, ಆದರೆ ಅವರ ಮನವಿಯನ್ನು ನಿರ್ಲಕ್ಷಿಸಲಾಯಿತು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಿರುವ ರಾಜ್ಯ ಸರ್ಕಾರಕ್ಕೆ ಅಧಿಕಾರಿದಲ್ಲಿ ಮುಂದುವರೆಯಲ್ಲು ಯಾವುದೇ ನೈತಿಕ ಅಧಿಕಾರವಿಲ್ಲ ಎಂದರು. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ