ಉಭಯ ಸದನಗಳಲ್ಲಿ ಸಿಎಂ ಕುಮಾರಸ್ವಾಮಿ ರಾಜೀನಾಮೆ ಒತ್ತಾಯ- ಕೋಟ ಶ್ರೀನಿವಾಸ ಪೂಜಾರಿ

ಸೋಮವಾರ, 15 ಜುಲೈ 2019 (12:44 IST)
ಬೆಂಗಳೂರು : ಸಿಎಂ ಹೆಚ್.ಡಿ. ಕುಮಾರಸ್ವಾಮಿ ರಾಜೀನಾಮೆ ನೀಡುವಂತೆ ಉಭಯ ಸದನಗಳಲ್ಲಿ ಒತ್ತಾಯ ಮಾಡುವುದಾಗಿ ವಿಧಾನಪರಿಷತ್ ವಿರೋಧಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.




ಸುದ್ದಿಗಾರರೊಂದಿಗೆ ಆತನಾಡಿದ ಅವರು, ಸಮ್ಮಿಶ್ರ ಸರ್ಕಾರ ಬಹುಮತ ಕಳೆದುಕೊಂಡಿದ್ದರೂ ಸರ್ಕಾರ ಮಾಡುವ ಭ್ರಮೆಯಲ್ಲಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಬಿಜೆಪಿ ಇದಕ್ಕೆ ವಿರೋಧ ಪಡಿಸಲಿದೆ ಎಂದು ಹೇಳಿದ್ದಾರೆ.


ವಿಧಾನಸಭೆಯಲ್ಲಿ ಬಿಜೆಪಿ ನಿರ್ಧಾರ ಏನು ಆಗಿರುತ್ತದೆಯೋ ಅದೇ ನಿಲುವನ್ನು ವಿಧಾನ ಪರಿಷತ್ ನಲ್ಲಿ ಬಿಜೆಪಿ ಹೊಂದಲಿದೆ. ಆದ್ದರಿಂದ ಸರ್ಕಾರ ಬಹುಮತ ಕಳೆದುಕೊಂಡಿರುವುದರಿಂದ ಉಭಯ ಸದನಗಳಲ್ಲಿ ಸಿಎಂ ರಾಜೀನಾಮೆಗೆ ಒತ್ತಾಯಿಸಲಾಗುವುದು ಎಂದು ತಿಳಿಸಿದ್ದಾರೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ