ಸುಮಲತಾ ಬಗ್ಗೆ ರೇವಣ್ಣ ವಿವಾದಾತ್ಮಕ ಹೇಳಿಕೆ ಬಳಿಕ ಸಿಎಂ ಎಚ್ ಡಿಕೆ ಜೆಡಿಎಸ್ ನಾಯಕರಿಗೆ ಖಡಕ್ ವಾರ್ನಿಂಗ್!

ಶನಿವಾರ, 9 ಮಾರ್ಚ್ 2019 (09:34 IST)
ಬೆಂಗಳೂರು: ಗಂಡ ಸತ್ತು ಆರು ತಿಂಗಳು ಕಳೆದಿಲ್ಲ. ಆಗಲೇ ಚುನಾವಣೆಗೆಸ್ಪರ್ಧಿಸುತ್ತಿದ್ದಾರೆ ಎಂದು ಸುಮಲತಾ ಅಂಬರೀಶ್ ಬಗ್ಗೆ ಜೆಡಿಎಸ್ ನಾಯಕ ಎಚ್ ಡಿ ರೇವಣ್ಣ ಹಗುರವಾಗಿ ಹೇಳಿಕೆ ನೀಡಿದ್ದು ಇದೀಗ ವಿವಾದವಾಗಿದೆ.


ಸಾಮಾಜಿಕ ಜಾಲತಾಣದಲ್ಲಂತೂ ಮಹಿಳಾ ದಿನಾಚರಣೆ ದಿನವೇ ರೇವಣ್ಣ ಸುಮಲತಾ ಬಗ್ಗೆ ಹೀಗೆ ಹೇಳಿದ್ದಕ್ಕೆ ಭಾರೀ ಟೀಕೆ ವ್ಯಕ್ತವಾಗುತ್ತಿದೆ. ಹೀಗಾಗಿ ಇದೀಗ ಜೆಡಿಎಸ್ ನಾಯಕರಿಗೆ ಸಿಎಂ ಕುಮಾರಸ್ವಾಮಿ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ.

ಸುಮಲತಾ ಸ್ಪರ್ಧೆ ತಮ್ಮ ಪಕ್ಷದ ನಾಯಕರು ಬಾಯಿಗೆ ಬಂದಂತೆ ಮಾತನಾಡುವುದನ್ನು ನಿಲ್ಲಿಸಬೇಕು ಎಂದು ಸ್ವತಃ ಸಿಎಂ ಸೂಚಿಸಿದ್ದಾರೆ. ಇದರಿಂದ ಪಕ್ಷಕ್ಕೆ ಡ್ಯಾಮೇಜ್ ಆಗುತ್ತದೆ. ಮಂಡ್ಯದ ಜನರ ನಾಡಿಮಿಡಿತ ನಮಗೆ ಗೊತ್ತಿದೆ. ಇಲ್ಲಿ ನಮಗೆ ಆಶೀರ್ವಾದ ನೀಡುತ್ತಾರೆ ಎಂದು ವಿಶ್ವಾಸವಿದೆ. ಹೀಗಿರುವಾಗ ನಮ್ಮ ಪಕ್ಷದ ನಾಯಕರು ಸುಮಲತಾ ಬಗ್ಗೆ ನಾಲಿಗೆ ಹರಿಯಬಿಡುವುದು ಬೇಕಿಲ್ಲ ಎಂದು ಕುಮಾರಸ್ವಾಮಿ ವಾರ್ನಿಂಗ್ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ