ನೆರೆ ಹಾನಿಗೆ ಪರಿಹಾರ ನೀಡಲು ರಾಜ್ಯ ಸರ್ಕಾರದ ಬಳಿ ಹಣ ಇಲ್ಲ ಎಂದ ಸಿಎಂ

ಶುಕ್ರವಾರ, 4 ಅಕ್ಟೋಬರ್ 2019 (09:17 IST)
ಬೆಳಗಾವಿ : ರಾಜ್ಯದಲ್ಲಿ ಉಂಟಾದ  ನೆರೆ ಹಾನಿಗೆ ಪರಿಹಾರ ನೀಡಲು ರಾಜ್ಯ ಸರ್ಕಾರದ ಬಳಿ ಹಣ ಇಲ್ಲ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಅವರು ಪರೋಕ್ಷವಾಗಿ ಹೇಳಿದ್ದಾರೆ.




ಬೆಳಗಾವಿಯ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸಿಎಂ ಬಿಎಸ್‍ ವೈ  ಅವರ ನೇತೃತ್ವದಲ್ಲಿ ನಡೆಸಿದ ಪ್ರವಾಹ ಪರಿಹಾರ ಕಾರ್ಯಗಳ ಪರಿಶೀಲನಾ ಸಭೆಯಲ್ಲಿ ಸವದತ್ತಿ ಕ್ಷೇತ್ರದ ಬಿಜೆಪಿ ಶಾಸಕ ಆನಂದ ಮಾಮನಿ ಅವರು, ನೆರೆಯಿಂದಾದ ಬೆಳಹಾನಿಗೆ ರೈತರಿಗೆ ಕೇಂದ್ರ ಸರ್ಕಾರ ನೀಡಿದ ಹಣದ ಜೊತೆಗೆ ರಾಜ್ಯ ಸರ್ಕಾರದ ಹಣ ಸೇರಿಸಿ ಕೊಡಿ ಎಂದು ಮನವಿ ಮಾಡಿದರು.


ಇದಕ್ಕೆ ಉತ್ತರಿಸಿದ ಸಿಎಂ, ಬೆಳೆಹಾನಿ ಬಗ್ಗೆ ಕೇಂದ್ರ ಸರ್ಕಾರ ತನ್ನ ನಿಯಮಗಳ ಅಡಿ ನೀಡುವ ಹಣವನ್ನು ನೀಡುತ್ತೇನೆ. ರಾಜ್ಯದಿಂದ ಹೆಚ್ಚುವರಿಯಾಗಿ ಬೆಳೆಹಾನಿಗೆ ನೀಡಲು ಹಣ ಎಲ್ಲಿದೆ. ಇನ್ನು 2-3 ದಿನಗಳಲ್ಲಿ ಕೇಂದ್ರದಿಂದ ಹಣ ಬಿಡುಗಡೆಯಾಗುತ್ತದೆ. ಶೀಘ್ರವೇ ಎಲ್ಲರಿಗೂ ಹಣ ಬಿಡುಗಡೆ ಮಾಡುತ್ತೇವೆ ಎಂದು ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ