ಅನರ್ಹ ಶಾಸಕ ಮಹೇಶ್ ಕುಮಟಳ್ಳಿಗೆ ಪಾಠ ಕಲಿಸಬೇಕು- ಲಕ್ಷ್ಮೀ ಹೆಬ್ಬಾಳ್ಕರ್ ಕಿಡಿ

ಭಾನುವಾರ, 24 ನವೆಂಬರ್ 2019 (11:08 IST)
ಬೆಳಗಾವಿ : ಅನರ್ಹ ಶಾಸಕ ಮಹೇಶ್ ಕುಮಟಳ್ಳಿಗೆ ಮಾತ್ರ ಪಾಠ ಕಲಿಸಬೇಕು ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಕುಮಟಳ್ಳಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.



ಅಥಣಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಲಕ್ಷ್ಮೀ ಹೆಬ್ಬಾಳ್ ಕರ್ , ಸಿಎಂ ಬೇಕಾದ್ರೆ ಜಿಲ್ಲೆಯ 18 ಜನರಿಗೆ ಸಚಿವ ಸ್ಥಾನ ನೀಡಲಿ. ಆದ್ರೆ ಅನರ್ಹ ಶಾಸಕ ಮಹೇಶ್ ಕುಮಟಳ್ಳಿಗೆ ಮಾತ್ರ ಪಾಠ ಕಲಿಸಬೇಕು ಎಂದು ಹೇಳಿದ್ದಾರೆ.


ಈ ಹಿಂದೆ ಕಾಂಗ್ರೆಸ್ ಟಿಕೆಟ್ ಕೊಡಿಸಲು ಸಹಾಯ ಮಾಡಿದ್ದೆ. ಕುಮಟಳ್ಳಿ ಒಳ್ಳೆಯವರಿದ್ದಾರೆಂದು ನಾವು ಅಂದುಕೊಂಡಿದ್ದೆವು. ಆದರೆ ಮಹೇಶ್ ಕುಮಟಳ್ಳಿ ಹೆತ್ತ ತಾಯಿಗೆ ದ್ರೋಹ ಮಾಡಿದ್ದಾರೆ ಎಂದು ಅವರು ಕುಮಟಳ್ಳಿ ವಿರುದ್ಧ ಕಿಡಿಕಾರಿದ್ದಾರೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ