ಉದ್ಯಮಿಗಳಿಂದ ವಿರೋಧ ವ್ಯಕ್ತವಾಗುತ್ತಿದ್ದಂತೇ ಕನ್ನಡಿಗರಿಗೆ ಮೀಸಲಾತಿ ಟ್ವೀಟ್ ನ್ನೇ ಡಿಲೀಟ್ ಮಾಡಿಬಿಟ್ಟ ಸಿದ್ದರಾಮಯ್ಯ
ಇದರ ಬೆನ್ನಲ್ಲೇ ಸಿಎಂ ಈ ಟ್ವೀಟ್ ನ್ನು ಡಿಲೀಟ್ ಮಾಡಿದ್ದಾರೆ. ವಿಧೇಯಕದಲ್ಲಿ ಮ್ಯಾನೇಜ್ ಮೆಂಟ್ ಹುದ್ದೆಗಳಲ್ಲಿ ಶೇ.50 ರಷ್ಟು ಮತ್ತು ಮ್ಯಾನೇಜ್ ಮೆಂಟ್ ಅಲ್ಲದ ಹುದ್ದೆಗಳಿಗೆ ಶೇ.50 ರಷ್ಟು ಕನ್ನಡಿಗರಿಗೆ ಮೀಸಲಾತಿ ಎಂದು ಸ್ಪಷ್ಟವಾಗಿ ಹೇಳಲಾಗಿದೆ. ಆದರೆ ಸಿ ಮತ್ತು ಡಿ ದರ್ಜೆ ನೌಕರಿಯಲ್ಲಿ ಶೇ.100 ರಷ್ಟು ಕನ್ನಡಿಗರಿಗೆ ಮೀಸಲಾತಿ ಎನ್ನುವ ಬಗ್ಗೆ ಗೊಂದಲಗಳಿವೆ ಎನ್ನಲಾಗಿದೆ.
ಇದೇ ಕಾರಣಕ್ಕೆ ಸಿಎಂ ಟ್ವೀಟ್ ಡಿಲೀಟ್ ಮಾಡಿರಬಹುದು ಎನ್ನಲಾಗುತ್ತದೆ. ಆದರೆ ಟ್ವೀಟ್ ಡಿಲೀಟ್ ಮಾಡಿರುವುದಕ್ಕೆ ಸಿಎಂ ಸ್ಪಷ್ಟ ಕಾರಣವನ್ನೇನೂ ಕೊಟ್ಟಿಲ್ಲ. ಕನ್ನಡ ಪರ, ಕನ್ನಡಿಗರ ಹಿತ ಕಾಯುವುದು ನಮ್ಮ ಆದ್ಯತೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದರು.