ಸಿಎಂ ಸಿದ್ದರಾಮಯ್ಯ ಸರ್ಕಾರ ಉತ್ತಮ ಕೆಲಸ ಮಾಡಿದೆ: ವೇಣುಗೋಪಾಲ್

ಗುರುವಾರ, 25 ಮೇ 2017 (15:41 IST)
ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರ ನಾಲ್ಕು ವರ್ಷಗಳ ಅವಧಿಯಲ್ಲಿ ಉತ್ತಮ ಕೆಲಸ ಮಾಡಿರುವುದರಿಂದ ಮತ್ತೆ ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಹೇಳಿದ್ದಾರೆ.
 
ಕೆಪಿಸಿಸಿ ಕಚೇರಿಯಲ್ಲಿ ಆಯೋಜಿಸಲಾದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂದಿನ ಚುನಾವಣೆಗೆ ಹಲವು ರಣನೀತಿಯನ್ನು ಮಾಡಿದ್ದೇವೆ. ಮೊದಲ ಬಾರಿಗೆ ಎಐಸಿಸಿ ಕಾರ್ಯದರ್ಶಿಯೊಬ್ಬರು ಕಾಂಗ್ರೆಸ್ ಕಾರ್ಯಕರ್ತರ ಅಹವಾಲುಗಳನ್ನು ಆಲಿಸಿದ್ದಾರೆ. ಕಾರ್ಯಕರ್ತರ ಸಮಸ್ಯೆಗಳನ್ನು ಆಲಿಸಲು ನಾಲ್ಕು ದಿನಗಳನ್ನು ಮೀಸಲಾಗಿರಿಸಲಾಗಿತ್ತು ಎಂದು ತಿಳಿಸಿದ್ದಾರೆ.
 
2018ರ ಚುನಾವಣೆಯೊಳಗೆ ಪ್ರತಿಯೊಂದು ಜಿಲ್ಲೆಯ ಸಮಸ್ಯೆಗಳ ಈಡೇರಿಸಲು ಕೆಪಿಸಿಸಿ ಬದ್ಧವಾಗಿದೆ ಎಂದು ತಿಳಿಸಿದ್ದಾರೆ.
 
ವೇಣುಗೋಪಾಲ್ ಮಾತನಾಡಲು ಆರಂಭಿಸುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ಎಂದಿನಂತೆ ನಿದ್ರೆಗೆ ಜಾರಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ