ಧರ್ಮಸಿಂಗ್ ಅಂತ್ಯಸಂಸ್ಕಾರಕ್ಕೆ ನೆಲೋಗಿಗೆ ಆಗಮಿಸಿದ ಸಿಎಂ

ಶುಕ್ರವಾರ, 28 ಜುಲೈ 2017 (15:40 IST)
ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳಲು ಸಿಎಂ ಸಿದ್ದರಾಮಯ್ಯ ನೆಲೋಗಿಗೆ ಆಗಮಿಸಿದ್ದಾರೆ.
 
ಬೆಂಗಳೂರಿನಿಂದ ಬೀದರ್‌ಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ, ಬೀದರ್‌ನಿಂದ ನೆಲೋಗಿಗೆ ಹೆಲಿಕಾಪ್ಟರ್ ಮೂಲಕ ತಲುಪಿದ್ದಾರೆ.
 
ಇಂದು ಸಂಜೆ ಧರ್ಮಸಿಂಗ್ ಅಂತ್ಯಸಂಸ್ಕಾರ ನಡೆಯಲಿದ್ದು, ಅಂತ್ಯಸಂಸ್ಕಾರದ ನಂತರ ಸಿಎಂ ಸಿದ್ದರಾಮಯ್ಯ ಬೆಂಗಳೂರಿಗೆ  ಮರಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ. 
 
ಅಜಾತ ಶತ್ರು ಧರ್ಮಸಿಂಗ್ ಅಂತ್ಯಸಂಸ್ಕಾರಕ್ಕೆ ಮಲ್ಲಿಕಾರ್ಜುನ್ ಖರ್ಗೆ ಸೇರಿದಂತೆ ಅನೇಕ ಗಣ್ಯಾತಿಗಣ್ಯ ರಾಜಕೀಯ ನಾಯಕರು ಆಗಮಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ