ಸಮನ್ವಯ ಸಮಿತಿ ಸಭೆಯಲ್ಲಿ ನಿದ್ರೆಗೆ ಜಾರಿದ ಸಿಎಂ

ಬುಧವಾರ, 10 ಮೇ 2017 (17:33 IST)
ಕೆಪಿಸಿಸಿ ಕಚೇರಿಯಲ್ಲಿ ನಡೆಯುತ್ತಿರುವ ಸಮನ್ವಯ ಸಮಿತಿ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತೆ ನಿದ್ರೆಗೆ ಜಾರಿ ಎಂದಿನ ಚಾಳಿ ಮುಂದುವರಿಸಿದ್ದಾರೆ.
 
ಸಮನ್ವಯ ಸಮಿತಿ ಸಭೆಯಲ್ಲಿ ಮುಖಂಡರು ಮಾತನಾಡುತ್ತಿದ್ದರೂ ಸಿಎಂ ಸಿದ್ದರಾಮಯ್ಯ ನಿದ್ರೆಗೆ ಜಾರಿರುವುದು ಕಂಡು ರಾಜ್ಯ ಉಸ್ತುವಾರಿ ಹೊತ್ತಿರುವ ಕೆ.ಸಿ.ವೇಣುಗೋಪಾಲ್ ಸೇರಿದಂತೆ ಇತರ ಮುಖಂಡರು ಗಲಿಬಿಲಿಗೊಳಗಾದರು.
 
ನಂತರ ಪಕ್ಕದಲ್ಲಿ ಕುಳಿತಿದ್ದ ನಾಯಕರು ಸಿಎಂ ಸಿದ್ದರಾಮಯ್ಯ ಅವರನ್ನು ಎಚ್ಚರಿಸಿದಾಗ ಸುಧಾರಿಸಿಕೊಂಡು ಮತ್ತೆ ಸಭೆಯತ್ತ ಗಮನಹರಿಸಿದರು ಎಂದು ಮೂಲಗಳು ತಿಳಿಸಿವೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ