ಈ ಬಾರಿ ಪ್ರತಾಪ್ ಸಿಂಹ ಅವ್ರನ್ನ ಗೆಲ್ಲಿಸಬೇಡಿ ಎಂದ ಸಿಎಂ ಸಿದ್ದರಾಮಯ್ಯ: ಹೀಗೆ ಹೇಳಿದ ಕಾರಣವಾದ್ರು ಏನು?

ಶುಕ್ರವಾರ, 1 ಸೆಪ್ಟಂಬರ್ 2023 (08:50 IST)
ಮೈಸೂರು : ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಪ್ರತಾಪ್ ಸಿಂಹ  ಅವರನ್ನ ದಯವಿಟ್ಟು ಗೆಲ್ಲಿಸಬೇಡಿ ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದ್ದಾರೆ.

ಮೈಸೂರಿನ ರಾಜೀವ್ನಗರದಲ್ಲಿ ನಡೆದ ಅಲ್ ಬದರ್ ಸರ್ಕಲ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ, ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ನರೇಂದ್ರ ಮೋದಿ ಪ್ರಧಾನಿಯಾಗಿ 9 ವರ್ಷಗಳಾಯಿತು. ಇಷ್ಟು ವರ್ಷದಲ್ಲಿ ಅವರು ಬರೀ ಸುಳ್ಳನ್ನೇ ಹೇಳುತ್ತಾ ಬಂದಿದ್ದಾರೆ. ಹಿಂದೂ ಮುಸ್ಲಿಂ, ಹಿಜಬ್, ಹಲಾಲ್ ಕಟ್ ವಿಚಾರಗಳನ್ನ ಮುಂದಿಟ್ಟುಕೊಂಡು ಸಮಾಜದ ಸಾಮರಸ್ಯವನ್ನೇ ಹಾಳು ಮಾಡಿದ್ದಾರೆ.

ಹೀಗಾಗಿ ಈ ಬಾರಿ ದಯಮಾಡಿ ಮೈಸೂರಿನ ಜನ ಪ್ರತಾಪ್ ಸಿಂಹನನ್ನ ಸಂಸತ್ತಿಗೆ ಆಯ್ಕೆ ಮಾಡಬೇಡಿ ಎಂದು ಕರೆ ನೀಡಿದ್ದಾರೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ