ಸಿಎಂ ಸಿದ್ದರಾಮಯ್ಯ ಭ್ರಷ್ಟಾಚಾರಿಗಳಿಗೆ ಆಶ್ರಯದಾತ- ಸಂಸದ ಪ್ರಹ್ಲಾದ್ ಜೋಶಿ

ಸೋಮವಾರ, 12 ಮಾರ್ಚ್ 2018 (11:58 IST)
ಬೆಂಗಳೂರು : ಸಿಎಂ ಸಿದ್ದರಾಮಯ್ಯ ಭ್ರಷ್ಟಾಚಾರಿಗಳಿಗೆ ಆಶ್ರಯದಾತ. ಅವರು ಭ್ರಷ್ಟಾಚಾರಿಗಳಿಗೆ ರಾಜಾಶ್ರಯ ನೀಡಿದ್ದಾರೆ ಎಂದು ಸಂಸದ ಪ್ರಹ್ಲಾದ್ ಜೋಶಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.


‘ಅಶೋಕ್ ಖೇಣಿಯಂತಹ ಭ್ರಷ್ಟರಿಗೆ ಕಾಂಗ್ರೆಸ್ ಮಣೆ ಹಾಕಿದೆ. ಅತ್ಯಾಚಾರಿ ಆರೋಪಿಗಳಿಗೆ ಸಿಎಂ ರಕ್ಷಣೆ ನೀಡಿದ್ದಾರೆ. ಭ್ರಷ್ಟಾಚಾರಿಗಳಿಗೆ ರಾಜಾಶ್ರಯ ನೀಡಿದ್ದಾರೆ. ಭ್ರಷ್ಟಚಾರಕ್ಕೆ ಸ್ವತಃ ಸಿದ್ದರಾಮಯ್ಯ ಕೈ ಜೋಡಿಸಿದ್ದಾರೆ. ಪೊಲೀಸ್ ಇಲಾಖೆಯ ವರ್ಗಾವಣೆಯಲ್ಲೇ ಕೋಟ್ಯಂತರ ಲೂಟಿ ಹೊಡೆಯುತ್ತಿದ್ದಾರೆ’ ಎಂದು ಸಂಸದ ಪ್ರಹ್ಲಾದ್ ಜೋಶಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ