ಯಾರೇ ಕೂಗಾಡಲಿ ಯಾರೇ ಹೋರಾಡಲಿ ನಾವೇ ಅಧಿಕಾರಕ್ಕೆ ಬರುವುದು ನಿಶ್ಚಿತ: ಸಿಎಂ

ಗುರುವಾರ, 18 ಮೇ 2017 (19:05 IST)
ಯಾರೇ ಕೂಗಾಡಲಿ ಯಾರೇ ಹೋರಾಡಲಿ ನಾವೇ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
 
ಜಿಲ್ಲೆಯ ಸಿಂಧಗಿ ತಾಲೂಕಿನ ಹೂವಿನಹಳ್ಳಿಯಲ್ಲಿ ಹೆಗ್ಗೇರೇಶ್ವರ ದೇವಸ್ಥಾನ ನವೀಕರಣ ಕಟ್ಟಡ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಡಾ.ರಾಜಕುಮಾರ್ ಅವರ ಹಾಡು, ಯಾರೇ ಕೂಗಾಡಲಿ ಯಾರೇ ಹೋರಾಡಲಿ ಮುಂದೆ ನಾವೇ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಬಿಜೆಪಿಗೆ ಟಾಂಗ್ ನೀಡಿದರು.
 
ನಟಸಾರ್ವಭೌಮ ಡಾ.ರಾಜಕುಮಾರ್ ಅಭಿಮಾನಿಗಳನ್ನು ದೇವರು ಎನ್ನುತ್ತಿದ್ದರು. ಅದರಂತೆ ನಮಗೆ ಮತದಾರರೇ ದೇವರಾಗಿದ್ದಾರೆ. ಮತದಾರ ದೇವರು ನಮ್ಮ ಕೈಬಿಡುವುದಿಲ್ಲ ಎನ್ನುವ ವಿಶ್ವಾಸವಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ