ಅವನ್ ಮನೆ ಹಾಳಾಗ, ಲೆಕ್ಕ ಬರೋಲ್ವಾ: ಸಿಎಂ ಕಿಡಿ

ಸೋಮವಾರ, 24 ಜುಲೈ 2017 (19:10 IST)
ಅವನ್ಯಾವನೋ ಒಬ್ಬ ಆರೋಪ ಮಾಡ್ತಿದ್ದಾನೆ. ಅವನ್ ಮನೆ ಹಾಳಾಗ ಅವನಿಗೆ ಲೆಕ್ಕ ಬರೋಲ್ವಾ ಎಂದು ಸಿಎಂ ಸಿದ್ದರಾಮಯ್ಯ ಪರೋಕ್ಷವಾಗಿ ಬಿಜೆಪಿ ಮುಖಂಡ ಎನ್.ಆರ್,ರಮೇಶ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
 
ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಅಭಿವೃದ್ಧಿ ಕಾರ್ಯಗಳಿಗೆ ಅಡ್ಡಗಾಲು ಹಾಕುವುದೇ ಬಿಜೆಪಿ ನಾಯಕರ ಕಾಯಕವಾಗಿದೆ. ಕೆಟ್ಟ ರಾಜಕೀಯ ಮಾಡುವುದರಲ್ಲಿಯೇ ಬಿಜೆಪಿ ಬಿಜಿಯಾಗಿದೆ ಎಂದು ಕಿಡಿಕಾರಿದರು.
 
ಸಿಎಂ ಸಿದ್ದರಾಮಯ್ಯ ಜಾತಿ ಹೆಸರಲ್ಲಿ ರಾಜಕೀಯ ಮಾಡಿಲ್ಲ. ರಾಜ್ಯದ ಜನತೆಯ ಏಳಿಗೆಯನ್ನು ಗಮನದಲ್ಲಿಟ್ಟುಕೊಂಡು ಅಭಿವೃದ್ಧಿ ಕಾರ್ಯಗಳನ್ನು ಮುಂದುವರಿಸುತ್ತಿದ್ದೇನೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ