ಇಷ್ಟು ದಿನ ಎಲ್ಲಿ ಹೋಗಿದ್ದೀರಿ? ಬರಗಾಲವಿರುವುದು ಗೊತ್ತಿಲ್ಲವೇ?: ಈಶ್ವರಪ್ಪಗೆ ಸಿಎಂ ತಿರುಗೇಟು

ಸೋಮವಾರ, 15 ಮೇ 2017 (13:09 IST)
ರಾಜ್ಯದಲ್ಲಿ ಬರಗಾಲವಿರುವುದು ಬಿಜೆಪಿಯವರಿಗೆ ತಿಳಿದಿರಲಿಲ್ಲವೇ? ಇಷ್ಟು ದಿನ ಎಲ್ಲಿ ಹೋಗಿದ್ದೀರಿ? ಎಂದು ಸಿಂ ಸಿದ್ದರಾಮಯ್ಯ ಈಶ್ವರಪ್ಪ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.
 
ಸಿಎಂ ಸಿದ್ದರಾಮಯ್ಯ ಎಸಿ ರೂಮ್‌ನಲ್ಲಿ ಕುಳಿತುಕೊಂಡು ಆದೇಶ ಮಾಡಿದರೆ ಬರಗಾಲ ನೀಗದು. ಹಳ್ಳಿ ಹಳ್ಳಿಗಳಲ್ಲಿ ಪ್ರವಾಸ ಮಾಡಿದಾಗ ಅಧಿಕಾರಿಗಳು ಕರ್ತವ್ಯನಿರ್ವಹಣೆಗೆ ಮುಂದಾಗುತ್ತಾರೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಆರೋಪಿಸಿದ್ದರು. 
 
ಬರಗಾಲದ ಪರಿಹಾರ ಅನುದಾನ ಬಿಡಗಡೆ ಮಾಡಲಾಗಿದೆ. ಬರಗಾಲ ನಿರ್ವಹಣೆಗೆ ಅಗತ್ಯವಾದ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಎಲ್ಲಾ ಮುಗಿದ ಮೇಲೆ ಬಿಜೆಪಿಯವರು ರಾಜ್ಯಪ್ರವಾಸ ಮಾಡುತ್ತಿದ್ದಾರೆ ಎಂದು ಲೇವಡಿ ಮಾಡಿದರು.
 
ಮೊದಲು ನಿಮ್ಮ ಮನೆಯನ್ನು ಸರಿಮಾಡಿಕೊಳ್ಳಿ. ನಿಮ್ಮಲ್ಲೇ ಬರಗಾಲ ಪ್ರವಾಸ ಕುರಿತಂತೆ ಭಿನ್ನಮತ ಉಲ್ಬಣವಾಗಿದೆ. ನಂತರ ಸರಕಾರದ ಬಗ್ಗೆ ಹೇಳಿಕೆ ನೀಡಿ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ