ಟೀಕೆಗಳ ಬಳಿಕ ಕೊನೆಗೂ ಹಣಕಾಸು ಆಯೋಗದ ಸಭೆಗೆ ಹೋಗಲು ತೀರ್ಮಾನಿಸಿದ ಸಿಎಂ ಸಿದ್ದರಾಮಯ್ಯ
ಈ ಹಿಂದೆ ನೀತಿ ಆಯೋಗದ ಸಭೆಗೆ ಸಿಎಂ ಸಿದ್ದರಾಮಯ್ಯ ಹೋಗಿರಲಿಲ್ಲ. ಇದು ಭಾರೀ ಟೀಕೆಗೆ ಗುರಿಯಾಗಿತ್ತು. ರಾಜ್ಯಕ್ಕೆ ಅನುದಾನ ಕೊಡಲ್ಲ ಎನ್ನುತ್ತಾರೆ. ಆದರೆ ಏನೋ ನೆಪ ಹೇಳಿ ಇಂತಹ ಮಹತ್ವದ ಸಭೆಗಳಿಂದ ತಪ್ಪಿಸಿಕೊಳ್ಳುತ್ತಾರೆ ಎಂದು ಟೀಕೆಗೊಳಗಾಗಿದ್ದರು.
ಆದರೆ ಈ ಬಾರಿ ಹಣಕಾಸು ಆಯೋಗದ ಸಭೆಗೆ ಸಿಎಂ ಭಾಗಿಯಾಗಲು ತೀರ್ಮಾನಿಸಿದ್ದಾರೆ. ಮೊನ್ನೆಯಷ್ಟೇ ದೆಹಲಿಯಲ್ಲ ಹೈಕಮಾಂಡ್ ಭೇಟಿ ಮಾಡಿ ಬಂದಿದ್ದ ಸಿಎಂ ಇಂದು ಮತ್ತೆ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಈ ಬಾರಿ ಎರಡು ದಿನ ಅವರು ದೆಹಲಿಯಲ್ಲಿ ಬೀಡು ಬಿಡಲಿದ್ದಾರೆ.
ಮೊದಲು ಕೇಂದ್ರ ಸಚಿವರನ್ನು ಭೇಟಿ ಮಾಡಲಿದ್ದು, ರಾಜ್ಯದ ಹಲವು ಬೇಡಿಕೆಗಳನ್ನು ಮುಂದಿಡಲಿದ್ದಾರೆ. ಇದಾದ ಬಳಿಕ ಹಣಕಾಸು ಆಯೋಗದ ಸಭೆಯಲ್ಲಿ ಅವರು ಭಾಗಿಯಾಗಲಿದ್ದಾರೆ ಎಂದು ತಿಳಿದುಬಂದಿದೆ.