ಕಾರಿನಲ್ಲೇ ಕುಳಿತು ಚಾಮುಂಡಿ ತಾಯಿಗೆ ಪೂಜೆ ಸಲ್ಲಿಸಿದ್ದ ಸಿದ್ದರಾಮಯ್ಯ ಪತ್ನಿ ಪಾರ್ವತಿ

Krishnaveni K

ಶನಿವಾರ, 12 ಅಕ್ಟೋಬರ್ 2024 (13:14 IST)
ಮೈಸೂರು: ದಸರಾ ಹಬ್ಬದ ಪ್ರಯುಕ್ತ ಸಿಎಂ ಸಿದ್ದರಾಮಯ್ಯ ಕುಟುಂಬಸ್ಥರು ಇಂದು ಚಾಮುಂಡಿ ತಾಯಿಗೆ ಪೂಜೆ ಸಲ್ಲಿಸಿದ್ದಾರೆ. ಆದರೆ ಸಿದ್ದರಾಮಯ್ಯ ಪತ್ನಿ ಮಾತ್ರ ಕಾರಿನಲ್ಲಿ ಕುಳಿತೇ ಚಾಮುಂಡಿ ತಾಯಿಗೆ ನಮಿಸಿದರು.

ಸಿಎಂ ಸಿದ್ದರಾಮಯ್ಯ ಪತ್ನಿ ಎಲ್ಲೂ ಸಾರ್ವಜನಿಕವಾಗಿ ಕಾಣಿಸಿಕೊಳ್ಳುವುದಿಲ್ಲ. ಇತ್ತೀಚೆಗೆ ಮುಡಾ ಹಗರಣದಲ್ಲಿ ಸಿಎಂ ಪತ್ನಿ ಪಾರ್ವತಿ ಹೆಸರು ಜೋರಾಗಿ ಕೇಳಿಬಂದಿತ್ತು. ಬಹುಶಃ ಇದೇ ಕಾರಣಕ್ಕೋ ಏನೋ ಅವರು ಇಂದೂ ಕೂಡಾ ಮಾಧ್ಯಮಗಳ ಕಣ್ಣಿಗೆ ಬೀಳಲು ಇಚ್ಛಿಸಲಿಲ್ಲ.

ಈ ಕಾರಣಕ್ಕೆ ಪಾರ್ವತಿ ಸಿದ್ದರಾಮಯ್ಯ ಚಾಮುಂಡಿ ಸನ್ನಿಧಾನಕ್ಕೆ ಬಂದರೂ ಕಾರಿನಿಂದ ಇಳಿಯದೇ ಕಾರಿನಲ್ಲೇ ಕೂತು ತಾಯಿಗೆ ನಮಿಸಿದರು. ಆದರೆ  ಸಿದ್ದರಾಮಯ್ಯ ಸೊಸೆ ಸ್ಮಿತಾ ರಾಕೇಶ್ ಉತ್ಸವ ಮೂರ್ತಿ ಬಳಿ ಬಂದು ಪೂಜೆ ಸಲ್ಲಿಸಿದರು. ಇಂದು ಜಂಬೂ ಸವಾರಿ ನಡೆಯಲಿದೆ.

ಇಂದಿನ ವಿಶ್ವ ವಿಖ್ಯಾತ ಜಂಬೂ ಸವಾರಿಯಲ್ಲಿ ತಾವು ಪಾಲ್ಗೊಳ್ಳುವುದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಇಂದು ಮಧ್ಯಾಹ್ನ ಆರಂಭವಾಗುವ ಜಂಬೂ ಸವಾರಿ ಸಂಜೆ ಕೊನೆಯಾಗಲಿದೆ. ನಿನ್ನೆ ಸಿದ್ದರಾಮಯ್ಯ ಮೈಸೂರಿಗೆ ಬಂದು ದೀಪಾಲಂಕಾರವನ್ನು ತೆರೆದ ಬಸ್ ನಲ್ಲಿ ಸಂಚರಿಸಿ ಸಂಭ್ರಮಪಟ್ಟಿದ್ದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ